July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

ಬೆಳ್ತಂಗಡಿ : ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ನಾರಾವಿ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆ.15ರಂದು ನಡೆಯಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೊಟ್ಟು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮಹಾವೀರ ಜೈನ್, ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ ಹಂಬಡ, ಶಶಿಕಾಂತ ಜೈನ್,ಎನ್ ದಿವಾಕರ ಭಂಡಾರಿ, ಮುನಿರಾಜ ಜೈನ್ ಹಾಗೂ ಇತರ ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು ಮತ್ತು ಟಿ ಎನ್ ಪ್ರೊಡಕ್ಷನ್ಸ್ ಇದರ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಸುರೇಂದ್ರ ಜೈನ್ ನಾರಾವಿ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಆಲ್ಬಂ ಸಾಂಗ್ ಗೆ ಪಾರ್ಶ್ವನಾಥ ಜೈನ್‌ ಕಕ್ಯಪದವು ಸಾಹಿತ್ಯ ರಚಿಸಿ ರಾಗ ಸಂಯೋಜಿಸಿದ್ದು, ಭಗೀರಥ್‌ ಕುಮುಟಾ ಮತ್ತು ಜಯಶ್ರೀ ಬೆಳ್ತಂಗಡಿ ಹಾಡಿದ್ದಾರೆ. ಗಣೇಶ್‌ ಹೆಗ್ಡೆ ನಾರಾವಿ ಮತ್ತು ಸುರಭಿ ಶೆಟ್ಟಿ ಕೊಕ್ರಾಡಿ ಅಭಿನಯಿಸಿದ್ದಾರೆ. ಅಶ್ವಿನ್ ಪುತ್ತೂರು ಸಂಗೀತ ನೀಡಿದ್ದಾರೆ.ಮುನಿರಾಜ ಜೈನ್ ನಾರಾವಿ ಸಂಯೋಜನೆ ಮಾಡಿದ್ದಾರೆ.ಪ್ರಸ್ತುತ ಹಾಡು ಟಿ ಎನ್ ಪ್ರೊಡಕ್ಷನ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಲಭ್ಯವಿದೆ.

Related posts

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya
error: Content is protected !!