September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಅಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಫೆ16 ಮತ್ತು 17 ರಂದು 2025-26ನೇ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಾಲಾ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.ಮುಖ್ಯ ಅತಿಥಿಗಳಾಗಿ ಸೇಕ್ರೆಡ್ ಹಾರ್ಟ್ ಕಾನ್ವೆಂಟಿನ ಧರ್ಮ ಭಗಿನಿಯಾದ ಸಿ|ಅನಿತಾ ಫೆರ್ನಾಂಡಿಸ್ ಆಗಮಿಸಿ ಮಾತನಾಡಿ, ಇದು ನಿಮ್ಮ ಪರಿಶ್ರಮ, ಸಮರ್ಪಣೆ ಮತ್ತು ಪ್ರಯತ್ನಗಳ ಫಲವಾಗಿದೆ. ಇಂದು ನೀವು ನಿಮ್ಮ ಪರಿಶ್ರಮದ ಯಶಸ್ಸನ್ನು ಆಚರಿಸುತ್ತಿದ್ದೀರಿ ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ವಂ |ಸ್ವಾ| ದೀಪಕ್ ಲಿಯೋ ಡೇಸ ರವರು ಮಾತನಾಡಿ ಸ್ಪರ್ಧೆಗಳಲ್ಲಿ ನಾವು ಗೆಲ್ಲುವುದು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ ನಾವು ಭಾಗವಹಿಸುವುದನ್ನು ನಿಲ್ಲಿಸಬಾರದು ಎಂದು ಹೇಳಿ ಶುಭ ಹಾರೈಸಿದರು. ನರ್ಸರಿ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಹಶಿಕ್ಷಕರಾದ ಜೆರಾಲ್ಡ್ ಡಿಸೋಜ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿಯರಾದ ರೀಮಾ ವೆರೋನ ರೋಡ್ರಿಗಸ್ ನಿರೂಪಿಸಿ, ಸಿ| ಟ್ರೀಜಾ ಡಿಸೋಜ ಸ್ವಾಗತಿಸಿ, ಶ್ವೇತಾ ಧನ್ಯವಾದವಿತ್ತರು.

Related posts

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಆರೋಗ್ಯ ಸಚಿವ ಯು.ಟಿ. ಖಾದರ್ ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ಗೆ ಭೇಟಿ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಬೋಳಿಯಾರ್ ಸಮೀಪ ಕಾರಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಡಾ. ಎಂ ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya
error: Content is protected !!