September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

ಅಂಡಿಂಜೆ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 28ನೇ ವರ್ಷದ ” ವಿಶ್ವಕರ್ಮ ಪೂಜೆ “ಯ ಸಂದರ್ಭ “ಉಚಿತ ಸಾಮೂಹಿಕ ಉಪನಯನ” ಕಾರ್ಯಕ್ರಮ ನಡೆಯಿತು.

ಶ್ರೀ ವೇಣೂರು ಪ್ರಕಾಶ ಪುರೋಹಿತರ ನೇತೃತ್ವ ,ಶ್ರೀ ವೇಲಾಪುರಿ ವಿಶ್ವನಾಥ ಶರ್ಮರ ಆಚಾರ್ಯತ್ವ ವಹಿಸಿದ್ದರು.
ಬಳಿಕ ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಮುಖ್ಯ ಅತಿಥಿಗಳಾಗಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು , ಜಿ.ಟಿ.ಆಚಾರ್ಯ ಮುಂಬೈ ,ಮೂಡಬಿದ್ರೆ ಗುರುಮಠ ಕಾಳಿಕಾಂಬಾ ದೇವಳದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಉಳಿಯ, ಉಜಿರೆಯ ಸ್ವರ್ಣೋಧ್ಯಮಿ ಆನಂದ ಆಚಾರ್ಯರು ಆಗಮಿಸಿದ್ದರು. ಕೂಡುವಳಿಕೆ ಗ್ರಾಮ ಮೊಕ್ತೇಸರ ರಾಧಾಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಘದ ಸದಸ್ಯರ ಉತ್ತಮ ಅಂಕ ಗಳಿಕ ವಿದ್ಯಾರ್ಥಿಗಳನ್ನು ಮತ್ತು ಉಪನಯದ ವಟುಗಳಿಗೆ ಬೇಕಾಗಿರುವ ಸಾಹಿತ್ಯವನ್ನು ಸಂಪೂರ್ಣವಾಗಿ ಒದಗಿಸಿದ ನವೀನ ಆಚಾರ್ಯ, ಪಿಲಿಯೂರು ಇವರನ್ನು ಗೌರವಿಸಲಾಯಿತು.
ಡಿ.ಭಾಸ್ಕರ ಆಚಾರ್ಯರು ಪ್ರಾಸ್ತಾವನೆಯೊಂದಿಗೆ ಸ್ವಾಗತಿಸಿ , ಸೌಮ್ಯಾ ರಾಧಾಕೃಷ್ಣ ವಂದಿಸಿದರು.
ಕು.ಸಾನಿಧ್ಯ ಬಿ.ಕೆ.ಆಚಾರ್ಯ ನಿರೂಪಿಸಿದರು.

Related posts

ಅಕ್ರಮ ಮರಳು ಸಾಗಾಟ: ಪೊಲೀಸರ ದಾಳಿ; ಎರಡು ಟಿಪ್ಪರ್ ವಾಹನ ವಶ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!