23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

ಅಂಡಿಂಜೆ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 28ನೇ ವರ್ಷದ ” ವಿಶ್ವಕರ್ಮ ಪೂಜೆ “ಯ ಸಂದರ್ಭ “ಉಚಿತ ಸಾಮೂಹಿಕ ಉಪನಯನ” ಕಾರ್ಯಕ್ರಮ ನಡೆಯಿತು.

ಶ್ರೀ ವೇಣೂರು ಪ್ರಕಾಶ ಪುರೋಹಿತರ ನೇತೃತ್ವ ,ಶ್ರೀ ವೇಲಾಪುರಿ ವಿಶ್ವನಾಥ ಶರ್ಮರ ಆಚಾರ್ಯತ್ವ ವಹಿಸಿದ್ದರು.
ಬಳಿಕ ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಮುಖ್ಯ ಅತಿಥಿಗಳಾಗಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು , ಜಿ.ಟಿ.ಆಚಾರ್ಯ ಮುಂಬೈ ,ಮೂಡಬಿದ್ರೆ ಗುರುಮಠ ಕಾಳಿಕಾಂಬಾ ದೇವಳದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಉಳಿಯ, ಉಜಿರೆಯ ಸ್ವರ್ಣೋಧ್ಯಮಿ ಆನಂದ ಆಚಾರ್ಯರು ಆಗಮಿಸಿದ್ದರು. ಕೂಡುವಳಿಕೆ ಗ್ರಾಮ ಮೊಕ್ತೇಸರ ರಾಧಾಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಘದ ಸದಸ್ಯರ ಉತ್ತಮ ಅಂಕ ಗಳಿಕ ವಿದ್ಯಾರ್ಥಿಗಳನ್ನು ಮತ್ತು ಉಪನಯದ ವಟುಗಳಿಗೆ ಬೇಕಾಗಿರುವ ಸಾಹಿತ್ಯವನ್ನು ಸಂಪೂರ್ಣವಾಗಿ ಒದಗಿಸಿದ ನವೀನ ಆಚಾರ್ಯ, ಪಿಲಿಯೂರು ಇವರನ್ನು ಗೌರವಿಸಲಾಯಿತು.
ಡಿ.ಭಾಸ್ಕರ ಆಚಾರ್ಯರು ಪ್ರಾಸ್ತಾವನೆಯೊಂದಿಗೆ ಸ್ವಾಗತಿಸಿ , ಸೌಮ್ಯಾ ರಾಧಾಕೃಷ್ಣ ವಂದಿಸಿದರು.
ಕು.ಸಾನಿಧ್ಯ ಬಿ.ಕೆ.ಆಚಾರ್ಯ ನಿರೂಪಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya
error: Content is protected !!