July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ) ಇಂದಬೆಟ್ಟು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಇದರ ಸಹಯೋಗದಲ್ಲಿ ಒಂದು ದಿನದ ಜೇನು ಕೃಷಿ ತರಬೇತಿಯನ್ನು ಪಂಚಾಯತ್ ಸಭಾಂಗಣದಲ್ಲಿ ಫೆ.17 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಕಾಶ್ಮೀ ಡಿ. ಶ್ರೀದೇವಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಎಮ್.ಬಿ.ಕೆ, ಎಲ್ ಸಿ ಆರ್ ಪಿ ಕೃಷಿ ಸಖಿ, ಪಶು ಸಖಿ, ಕೃಷಿ ಅಧಿಕಾರಿ ಗಣೇಶ್ ಉಪಸ್ಥಿತರಿದ್ದು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮದ ರೈತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕೃಷಿ ಇಲಾಖೆಯ ಸಹಾಯಕ ನಿರ್ದೆಶಕ ರಮೇಶ್ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿ, ಪ್ರಗತಿಪರ ಕೃಷಿಕ ಪ್ರಭಾಕರ್ ಮಯ್ಯರವರು ಜೇನು ಕೃಷಿ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು. ಹಾಗೂ ಸಾವಯವ ಕೃಷಿ ಬಗ್ಗೆ ಅಡಿಕೆ ಗಿಡ ಅದಕ್ಕೆ ಬರುವ ರೋಗಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಸುಮಾರು 60 ಕ್ಕೂ ಹೆಚ್ಚು ರೈತರು ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮವನ್ನು ಕೃಷಿ ಸಖಿ ಕವಿತಾ ಸ್ವಾಗತಿಸಿ , ಶ್ರುತಿ ಧನ್ಯವಾದವಿತ್ತರು.

Related posts

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!