September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ) ಇಂದಬೆಟ್ಟು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಇದರ ಸಹಯೋಗದಲ್ಲಿ ಒಂದು ದಿನದ ಜೇನು ಕೃಷಿ ತರಬೇತಿಯನ್ನು ಪಂಚಾಯತ್ ಸಭಾಂಗಣದಲ್ಲಿ ಫೆ.17 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಕಾಶ್ಮೀ ಡಿ. ಶ್ರೀದೇವಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಎಮ್.ಬಿ.ಕೆ, ಎಲ್ ಸಿ ಆರ್ ಪಿ ಕೃಷಿ ಸಖಿ, ಪಶು ಸಖಿ, ಕೃಷಿ ಅಧಿಕಾರಿ ಗಣೇಶ್ ಉಪಸ್ಥಿತರಿದ್ದು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮದ ರೈತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕೃಷಿ ಇಲಾಖೆಯ ಸಹಾಯಕ ನಿರ್ದೆಶಕ ರಮೇಶ್ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿ, ಪ್ರಗತಿಪರ ಕೃಷಿಕ ಪ್ರಭಾಕರ್ ಮಯ್ಯರವರು ಜೇನು ಕೃಷಿ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು. ಹಾಗೂ ಸಾವಯವ ಕೃಷಿ ಬಗ್ಗೆ ಅಡಿಕೆ ಗಿಡ ಅದಕ್ಕೆ ಬರುವ ರೋಗಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಸುಮಾರು 60 ಕ್ಕೂ ಹೆಚ್ಚು ರೈತರು ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮವನ್ನು ಕೃಷಿ ಸಖಿ ಕವಿತಾ ಸ್ವಾಗತಿಸಿ , ಶ್ರುತಿ ಧನ್ಯವಾದವಿತ್ತರು.

Related posts

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya
error: Content is protected !!