22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

ಕಡಬ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಪದೆ ಪದೆ ಸಂಚಾರಿ ಸ್ಟುಡಿಯೋ ಯೂಟ್ಯೂಬ್ ಮೂಲಕ ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಪ್ರಸಾರ ಮಾಡಿದ ಪ್ರಕರಣ ಸಂಬಂಧ ನೋಟಿಸ್ ಜಾರಿಯಾಗಿದ್ದರು ಕೂಡ ಮತ್ತೆ ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 30 ದಿನಗಳ ಕಾಲ ಜೈಲು ಶಿಕ್ಷೆ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಸಿಬ್ಬಂದಿ ಜೊತೆಯಲ್ಲಿ ಬೆಂಗಳೂರು ಪೊಲೀಸರು ಫೆ‌.18 ರಂದು ಕಡಬಕ್ಕೆ ಆಗಮಿಸಿ ಸಂತೋಷ್ ನನ್ನು ಆತನ ಶಾಪ್ ನಿಂದ ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ.

ಸಂಜೆ ವೇಳೆಗೆ ಬೆಂಗಳೂರು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿ 30 ದಿನಗಳ ಕಾಲ ಜೈಲಿಗೆ ಕಳುಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ವಕೀಲರಾದ ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು.

Related posts

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya
error: Content is protected !!