23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

ಕಡಬ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಪದೆ ಪದೆ ಸಂಚಾರಿ ಸ್ಟುಡಿಯೋ ಯೂಟ್ಯೂಬ್ ಮೂಲಕ ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಪ್ರಸಾರ ಮಾಡಿದ ಪ್ರಕರಣ ಸಂಬಂಧ ನೋಟಿಸ್ ಜಾರಿಯಾಗಿದ್ದರು ಕೂಡ ಮತ್ತೆ ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 30 ದಿನಗಳ ಕಾಲ ಜೈಲು ಶಿಕ್ಷೆ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಸಿಬ್ಬಂದಿ ಜೊತೆಯಲ್ಲಿ ಬೆಂಗಳೂರು ಪೊಲೀಸರು ಫೆ‌.18 ರಂದು ಕಡಬಕ್ಕೆ ಆಗಮಿಸಿ ಸಂತೋಷ್ ನನ್ನು ಆತನ ಶಾಪ್ ನಿಂದ ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ.

ಸಂಜೆ ವೇಳೆಗೆ ಬೆಂಗಳೂರು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿ 30 ದಿನಗಳ ಕಾಲ ಜೈಲಿಗೆ ಕಳುಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ವಕೀಲರಾದ ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು.

Related posts

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya
error: Content is protected !!