March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

ಬೆಳ್ತಂಗಡಿ : ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ನಾರಾವಿ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆ.15ರಂದು ನಡೆಯಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೊಟ್ಟು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮಹಾವೀರ ಜೈನ್, ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ ಹಂಬಡ, ಶಶಿಕಾಂತ ಜೈನ್,ಎನ್ ದಿವಾಕರ ಭಂಡಾರಿ, ಮುನಿರಾಜ ಜೈನ್ ಹಾಗೂ ಇತರ ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು ಮತ್ತು ಟಿ ಎನ್ ಪ್ರೊಡಕ್ಷನ್ಸ್ ಇದರ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಸುರೇಂದ್ರ ಜೈನ್ ನಾರಾವಿ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಆಲ್ಬಂ ಸಾಂಗ್ ಗೆ ಪಾರ್ಶ್ವನಾಥ ಜೈನ್‌ ಕಕ್ಯಪದವು ಸಾಹಿತ್ಯ ರಚಿಸಿ ರಾಗ ಸಂಯೋಜಿಸಿದ್ದು, ಭಗೀರಥ್‌ ಕುಮುಟಾ ಮತ್ತು ಜಯಶ್ರೀ ಬೆಳ್ತಂಗಡಿ ಹಾಡಿದ್ದಾರೆ. ಗಣೇಶ್‌ ಹೆಗ್ಡೆ ನಾರಾವಿ ಮತ್ತು ಸುರಭಿ ಶೆಟ್ಟಿ ಕೊಕ್ರಾಡಿ ಅಭಿನಯಿಸಿದ್ದಾರೆ. ಅಶ್ವಿನ್ ಪುತ್ತೂರು ಸಂಗೀತ ನೀಡಿದ್ದಾರೆ.ಮುನಿರಾಜ ಜೈನ್ ನಾರಾವಿ ಸಂಯೋಜನೆ ಮಾಡಿದ್ದಾರೆ.ಪ್ರಸ್ತುತ ಹಾಡು ಟಿ ಎನ್ ಪ್ರೊಡಕ್ಷನ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಲಭ್ಯವಿದೆ.

Related posts

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya
error: Content is protected !!