September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

ಬೆಳ್ತಂಗಡಿ : ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ನಾರಾವಿ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆ.15ರಂದು ನಡೆಯಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೊಟ್ಟು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮಹಾವೀರ ಜೈನ್, ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ ಹಂಬಡ, ಶಶಿಕಾಂತ ಜೈನ್,ಎನ್ ದಿವಾಕರ ಭಂಡಾರಿ, ಮುನಿರಾಜ ಜೈನ್ ಹಾಗೂ ಇತರ ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು ಮತ್ತು ಟಿ ಎನ್ ಪ್ರೊಡಕ್ಷನ್ಸ್ ಇದರ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಸುರೇಂದ್ರ ಜೈನ್ ನಾರಾವಿ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಆಲ್ಬಂ ಸಾಂಗ್ ಗೆ ಪಾರ್ಶ್ವನಾಥ ಜೈನ್‌ ಕಕ್ಯಪದವು ಸಾಹಿತ್ಯ ರಚಿಸಿ ರಾಗ ಸಂಯೋಜಿಸಿದ್ದು, ಭಗೀರಥ್‌ ಕುಮುಟಾ ಮತ್ತು ಜಯಶ್ರೀ ಬೆಳ್ತಂಗಡಿ ಹಾಡಿದ್ದಾರೆ. ಗಣೇಶ್‌ ಹೆಗ್ಡೆ ನಾರಾವಿ ಮತ್ತು ಸುರಭಿ ಶೆಟ್ಟಿ ಕೊಕ್ರಾಡಿ ಅಭಿನಯಿಸಿದ್ದಾರೆ. ಅಶ್ವಿನ್ ಪುತ್ತೂರು ಸಂಗೀತ ನೀಡಿದ್ದಾರೆ.ಮುನಿರಾಜ ಜೈನ್ ನಾರಾವಿ ಸಂಯೋಜನೆ ಮಾಡಿದ್ದಾರೆ.ಪ್ರಸ್ತುತ ಹಾಡು ಟಿ ಎನ್ ಪ್ರೊಡಕ್ಷನ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಲಭ್ಯವಿದೆ.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಮುಂಡಾಜೆ: 36 ವರ್ಷಗಳ ಸಾರ್ಥಕ ಸೇವೆಯ ಬಳಿಕ ಶಿಕ್ಷಕಿ ಜಯಂತಿ ಟಿ. ವಯೋನಿವೃತ್ತಿ

Suddi Udaya

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya
error: Content is protected !!