September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಿತ್ತಬಾಗಿಲು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಿತ್ತಬಾಗಿಲು ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.14 ರಂದು ನಡೆಯಿತು.

ಮನೆಯ ಯಜಮಾನರಾದ ನೋಣಯ್ಯ ಪೂಜಾರಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಜಾತ್ರೋತ್ಸವಕ್ಕೆ ಶುಭ ಹಾರೈಸಿದರು.


ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿ ಸದಸ್ಯರೂ, ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ನಿತ್ಯಾನಂದ ನಾವರ ಪ್ರಸ್ತಾವಿಕವಾಗಿ ಮಾತನಾಡುತ್ತಾ ಕ್ಷೇತ್ರ ನಡೆದು ಬಂದ ಹಾದಿಯನ್ನು ವಿವರಿಸಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ಗ್ರಾಮದ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು. ಕಾರ್ಯಕ್ರಮದಲ್ಲಿ ಲೋಕೇಶ್ ಪೂಜಾರಿ, ದೇಜಮ್ಮ, ಧರ್ಣಮ್ಮ, ಸುರೇಂದ್ರ ಪೂಜಾರಿ, ವಂದಿತ್ ಮುಂತಾದವರು ಉಪಸ್ಥಿತರಿದ್ದರು. ಲಾಯಿಲ ವಲಯ ಸಂಚಾಲಕರಾದ ಚಂದ್ರಶೇಖರ್ ಇಂದಬೆಟ್ಟು ಕಾರ್ಯಕ್ರಮವನ್ನು ಸಂಯೋಜಿಸಿ ಉಪಸ್ಥಿತರಿದ್ದರು.

Related posts

ಶಿಶಿಲ: ಹಾವು ಕಡಿತ ಪ್ರಕರಣ-ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಕರುಣಾಕರ ಶಿಶಿಲರಿಂದ ಮನವಿ

Suddi Udaya

ಪಡಂಗಡಿಯಲ್ಲಿ ಮಧ್ಯವರ್ಜನ ಶಿಬಿರ ಉದ್ಘಾಟನೆ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya
error: Content is protected !!