22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕಡಿರುದ್ಯಾವರ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾ. 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕಡಿರುದ್ಯಾವರ ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.14 ರಂದು ನಡೆಯಿತು. ಮನೆಯ ಯಜಮಾನರಾದ ಅಶೋಕ ಕುಮಾರ್ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಜಾತ್ರೋತ್ಸವಕ್ಕೆ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿ ಸದಸ್ಯರೂ,ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ಶ್ರೀ ನಿತ್ಯಾನಂದ ನಾವರ ರವರು ಪ್ರಸ್ತಾವಿಕವಾಗಿ ಮಾತನಾಡುತ್ತಾ ಕ್ಷೇತ್ರ ನಡೆದು ಬಂದ ಹಾದಿಯನ್ನು ವಿವರಿಸಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ಗ್ರಾಮದ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು. ಕಾರ್ಯಕ್ರಮದಲ್ಲಿ ಪುರುಷೋತ್ತಮ್, ಸುಂದರ ಪೂಜಾರಿ, ಕೇಶವ ಪೂಜಾರಿ, ಲಕ್ಷ್ಮಣ ಪೂಜಾರಿ, ಪ್ರವೀಣ ಪೂಜಾರಿ, ಪ್ರಶಾಂತಿ ಅಶೋಕ್ ಪೂಜಾರಿ, ಮನೀಶ್,ಮಾನ್ಯ ಯಶಸ್ ಪೂಜಾರಿ ಧ್ಯಾನೇಶ್ ಮುಂತಾದವರು ಹಾಜರಿದ್ದರು ಕಾರ್ಯಕ್ರಮವನ್ನು ಲಾಯಿಲ ವಲಯ ಸಂಚಾಲಕರಾದ ಚಂದ್ರಶೇಖರ್ ಇಂದಬೆಟ್ಟು ರವರು ಸಂಯೋಜಿಸಿ ಉಪಸ್ಥಿತರಿದ್ದರು,

Related posts

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya
error: Content is protected !!