23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

ಅಂಡಿಂಜೆ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 28ನೇ ವರ್ಷದ ” ವಿಶ್ವಕರ್ಮ ಪೂಜೆ “ಯ ಸಂದರ್ಭ “ಉಚಿತ ಸಾಮೂಹಿಕ ಉಪನಯನ” ಕಾರ್ಯಕ್ರಮ ನಡೆಯಿತು.

ಶ್ರೀ ವೇಣೂರು ಪ್ರಕಾಶ ಪುರೋಹಿತರ ನೇತೃತ್ವ ,ಶ್ರೀ ವೇಲಾಪುರಿ ವಿಶ್ವನಾಥ ಶರ್ಮರ ಆಚಾರ್ಯತ್ವ ವಹಿಸಿದ್ದರು.
ಬಳಿಕ ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಮುಖ್ಯ ಅತಿಥಿಗಳಾಗಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು , ಜಿ.ಟಿ.ಆಚಾರ್ಯ ಮುಂಬೈ ,ಮೂಡಬಿದ್ರೆ ಗುರುಮಠ ಕಾಳಿಕಾಂಬಾ ದೇವಳದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಉಳಿಯ, ಉಜಿರೆಯ ಸ್ವರ್ಣೋಧ್ಯಮಿ ಆನಂದ ಆಚಾರ್ಯರು ಆಗಮಿಸಿದ್ದರು. ಕೂಡುವಳಿಕೆ ಗ್ರಾಮ ಮೊಕ್ತೇಸರ ರಾಧಾಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಘದ ಸದಸ್ಯರ ಉತ್ತಮ ಅಂಕ ಗಳಿಕ ವಿದ್ಯಾರ್ಥಿಗಳನ್ನು ಮತ್ತು ಉಪನಯದ ವಟುಗಳಿಗೆ ಬೇಕಾಗಿರುವ ಸಾಹಿತ್ಯವನ್ನು ಸಂಪೂರ್ಣವಾಗಿ ಒದಗಿಸಿದ ನವೀನ ಆಚಾರ್ಯ, ಪಿಲಿಯೂರು ಇವರನ್ನು ಗೌರವಿಸಲಾಯಿತು.
ಡಿ.ಭಾಸ್ಕರ ಆಚಾರ್ಯರು ಪ್ರಾಸ್ತಾವನೆಯೊಂದಿಗೆ ಸ್ವಾಗತಿಸಿ , ಸೌಮ್ಯಾ ರಾಧಾಕೃಷ್ಣ ವಂದಿಸಿದರು.
ಕು.ಸಾನಿಧ್ಯ ಬಿ.ಕೆ.ಆಚಾರ್ಯ ನಿರೂಪಿಸಿದರು.

Related posts

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya
error: Content is protected !!