September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

ಅಂಡಿಂಜೆ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 28ನೇ ವರ್ಷದ ” ವಿಶ್ವಕರ್ಮ ಪೂಜೆ “ಯ ಸಂದರ್ಭ “ಉಚಿತ ಸಾಮೂಹಿಕ ಉಪನಯನ” ಕಾರ್ಯಕ್ರಮ ನಡೆಯಿತು.

ಶ್ರೀ ವೇಣೂರು ಪ್ರಕಾಶ ಪುರೋಹಿತರ ನೇತೃತ್ವ ,ಶ್ರೀ ವೇಲಾಪುರಿ ವಿಶ್ವನಾಥ ಶರ್ಮರ ಆಚಾರ್ಯತ್ವ ವಹಿಸಿದ್ದರು.
ಬಳಿಕ ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಮುಖ್ಯ ಅತಿಥಿಗಳಾಗಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು , ಜಿ.ಟಿ.ಆಚಾರ್ಯ ಮುಂಬೈ ,ಮೂಡಬಿದ್ರೆ ಗುರುಮಠ ಕಾಳಿಕಾಂಬಾ ದೇವಳದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಉಳಿಯ, ಉಜಿರೆಯ ಸ್ವರ್ಣೋಧ್ಯಮಿ ಆನಂದ ಆಚಾರ್ಯರು ಆಗಮಿಸಿದ್ದರು. ಕೂಡುವಳಿಕೆ ಗ್ರಾಮ ಮೊಕ್ತೇಸರ ರಾಧಾಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಘದ ಸದಸ್ಯರ ಉತ್ತಮ ಅಂಕ ಗಳಿಕ ವಿದ್ಯಾರ್ಥಿಗಳನ್ನು ಮತ್ತು ಉಪನಯದ ವಟುಗಳಿಗೆ ಬೇಕಾಗಿರುವ ಸಾಹಿತ್ಯವನ್ನು ಸಂಪೂರ್ಣವಾಗಿ ಒದಗಿಸಿದ ನವೀನ ಆಚಾರ್ಯ, ಪಿಲಿಯೂರು ಇವರನ್ನು ಗೌರವಿಸಲಾಯಿತು.
ಡಿ.ಭಾಸ್ಕರ ಆಚಾರ್ಯರು ಪ್ರಾಸ್ತಾವನೆಯೊಂದಿಗೆ ಸ್ವಾಗತಿಸಿ , ಸೌಮ್ಯಾ ರಾಧಾಕೃಷ್ಣ ವಂದಿಸಿದರು.
ಕು.ಸಾನಿಧ್ಯ ಬಿ.ಕೆ.ಆಚಾರ್ಯ ನಿರೂಪಿಸಿದರು.

Related posts

ಗೇರುಕಟ್ಟೆ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಮತ್ತು ಪಾಲಿ ಕ್ಲಿನಿಕ್ ಉದ್ಘಾಟನೆ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ನಾರಾವಿ: ಮಾಂಡೋವಿ ಮೋಟಾರ್‍ಸ್ ನಾರಾವಿ ಶಾಖೆಯ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya
error: Content is protected !!