July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

ಅಂಡಿಂಜೆ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 28ನೇ ವರ್ಷದ ” ವಿಶ್ವಕರ್ಮ ಪೂಜೆ “ಯ ಸಂದರ್ಭ “ಉಚಿತ ಸಾಮೂಹಿಕ ಉಪನಯನ” ಕಾರ್ಯಕ್ರಮ ನಡೆಯಿತು.

ಶ್ರೀ ವೇಣೂರು ಪ್ರಕಾಶ ಪುರೋಹಿತರ ನೇತೃತ್ವ ,ಶ್ರೀ ವೇಲಾಪುರಿ ವಿಶ್ವನಾಥ ಶರ್ಮರ ಆಚಾರ್ಯತ್ವ ವಹಿಸಿದ್ದರು.
ಬಳಿಕ ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಮುಖ್ಯ ಅತಿಥಿಗಳಾಗಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು , ಜಿ.ಟಿ.ಆಚಾರ್ಯ ಮುಂಬೈ ,ಮೂಡಬಿದ್ರೆ ಗುರುಮಠ ಕಾಳಿಕಾಂಬಾ ದೇವಳದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಉಳಿಯ, ಉಜಿರೆಯ ಸ್ವರ್ಣೋಧ್ಯಮಿ ಆನಂದ ಆಚಾರ್ಯರು ಆಗಮಿಸಿದ್ದರು. ಕೂಡುವಳಿಕೆ ಗ್ರಾಮ ಮೊಕ್ತೇಸರ ರಾಧಾಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಘದ ಸದಸ್ಯರ ಉತ್ತಮ ಅಂಕ ಗಳಿಕ ವಿದ್ಯಾರ್ಥಿಗಳನ್ನು ಮತ್ತು ಉಪನಯದ ವಟುಗಳಿಗೆ ಬೇಕಾಗಿರುವ ಸಾಹಿತ್ಯವನ್ನು ಸಂಪೂರ್ಣವಾಗಿ ಒದಗಿಸಿದ ನವೀನ ಆಚಾರ್ಯ, ಪಿಲಿಯೂರು ಇವರನ್ನು ಗೌರವಿಸಲಾಯಿತು.
ಡಿ.ಭಾಸ್ಕರ ಆಚಾರ್ಯರು ಪ್ರಾಸ್ತಾವನೆಯೊಂದಿಗೆ ಸ್ವಾಗತಿಸಿ , ಸೌಮ್ಯಾ ರಾಧಾಕೃಷ್ಣ ವಂದಿಸಿದರು.
ಕು.ಸಾನಿಧ್ಯ ಬಿ.ಕೆ.ಆಚಾರ್ಯ ನಿರೂಪಿಸಿದರು.

Related posts

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!