25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

ಕೊಕ್ಕಡ: ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿಕಲ್ಲು ಮಜಲು ಇಲ್ಲಿ 15ನೇ ವರ್ಷದ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ಗಣ ಹೋಮ, ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ ಗ್ರಾಮಸ್ಥರ ಸಹಕಾರದಿಂದ ನಡೆಯಿತು.

ಈ ಸಂದರ್ಭದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯುವ ನೇಮೋತ್ಸವ ದ ಬಗ್ಗೆ ಸಭೆಯನ್ನು ನಡೆಸಲಾಯಿತು. ಕಳೆದ 15 ವರ್ಷದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕುಶಾಲಪ್ಪ ಗೌಡ ಪುಡಿಕೆತ್ತೂರು ಇವರನ್ನು ಮುಂದಿನ ಒಂದು ವರ್ಷದ ಅವಧಿಗೆ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ , ಪುರುಷೋತ್ತಮ ನಾಯ್ಕ್, ಕೃಷ್ಣಪ್ಪ ಗೌಡ ಪೂವಾಜೆ, ಶ್ರೀನಿವಾಸ ಬಾಂತಿಮಾರು, ಸುಂದರ ಪೂಜಾರಿ ಅಂಕದಮಜಲು, ಕೋಟಿಯಪ್ಪ ಗೌಡ ಖಡೀರ, ಶ್ರೀಮತಿ ಅಶ್ವಿನಿ ಓಣಿತ್ತಾರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya
error: Content is protected !!