July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

ಕಡಬ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಪದೆ ಪದೆ ಸಂಚಾರಿ ಸ್ಟುಡಿಯೋ ಯೂಟ್ಯೂಬ್ ಮೂಲಕ ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಪ್ರಸಾರ ಮಾಡಿದ ಪ್ರಕರಣ ಸಂಬಂಧ ನೋಟಿಸ್ ಜಾರಿಯಾಗಿದ್ದರು ಕೂಡ ಮತ್ತೆ ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 30 ದಿನಗಳ ಕಾಲ ಜೈಲು ಶಿಕ್ಷೆ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಸಿಬ್ಬಂದಿ ಜೊತೆಯಲ್ಲಿ ಬೆಂಗಳೂರು ಪೊಲೀಸರು ಫೆ‌.18 ರಂದು ಕಡಬಕ್ಕೆ ಆಗಮಿಸಿ ಸಂತೋಷ್ ನನ್ನು ಆತನ ಶಾಪ್ ನಿಂದ ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ.

ಸಂಜೆ ವೇಳೆಗೆ ಬೆಂಗಳೂರು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿ 30 ದಿನಗಳ ಕಾಲ ಜೈಲಿಗೆ ಕಳುಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ವಕೀಲರಾದ ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು.

Related posts

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!