March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

ಬೆಳ್ತಂಗಡಿ : ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮ ನಾರಾವಿ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆ.15ರಂದು ನಡೆಯಿತು.
ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೊಟ್ಟು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.

ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮಹಾವೀರ ಜೈನ್, ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ ಹಂಬಡ, ಶಶಿಕಾಂತ ಜೈನ್,ಎನ್ ದಿವಾಕರ ಭಂಡಾರಿ, ಮುನಿರಾಜ ಜೈನ್ ಹಾಗೂ ಇತರ ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು ಮತ್ತು ಟಿ ಎನ್ ಪ್ರೊಡಕ್ಷನ್ಸ್ ಇದರ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಸುರೇಂದ್ರ ಜೈನ್ ನಾರಾವಿ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಆಲ್ಬಂ ಸಾಂಗ್ ಗೆ ಪಾರ್ಶ್ವನಾಥ ಜೈನ್‌ ಕಕ್ಯಪದವು ಸಾಹಿತ್ಯ ರಚಿಸಿ ರಾಗ ಸಂಯೋಜಿಸಿದ್ದು, ಭಗೀರಥ್‌ ಕುಮುಟಾ ಮತ್ತು ಜಯಶ್ರೀ ಬೆಳ್ತಂಗಡಿ ಹಾಡಿದ್ದಾರೆ. ಗಣೇಶ್‌ ಹೆಗ್ಡೆ ನಾರಾವಿ ಮತ್ತು ಸುರಭಿ ಶೆಟ್ಟಿ ಕೊಕ್ರಾಡಿ ಅಭಿನಯಿಸಿದ್ದಾರೆ. ಅಶ್ವಿನ್ ಪುತ್ತೂರು ಸಂಗೀತ ನೀಡಿದ್ದಾರೆ.ಮುನಿರಾಜ ಜೈನ್ ನಾರಾವಿ ಸಂಯೋಜನೆ ಮಾಡಿದ್ದಾರೆ.ಪ್ರಸ್ತುತ ಹಾಡು ಟಿ ಎನ್ ಪ್ರೊಡಕ್ಷನ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಲಭ್ಯವಿದೆ.

Related posts

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!