22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು; ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ

ಮೊಗ್ರು : ಜೈ ಶ್ರೀ ರಾಮ್ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು,ಶ್ರೀ ರಾಮ ಶಿಶು ಮಂದಿರದ ನಾಲ್ಕನೇ ವರ್ಷದ ವಾರ್ಷಿಕೋತ್ಸವ, ಭಾರತ್ ಮಾತಾ ಪೂಜಾನ ಕಾರ್ಯಕ್ರಮ ಮತ್ತು ಮಾತೃ ಪಾದಪೂಜೆ, ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಫೆ 13 ರಂದು ನೆರವೇರಿತು.

ಶಿಶು ಮಂದಿರದ ಚಿಣ್ಣರು ತಮ್ಮ ತಾಯಂದಿರ ಪಾದ ಪೂಜೆ ಸಲ್ಲಿಸಿದ ಕ್ಷಣ ರಮಣೀಯವಾಗಿತ್ತು. ಮಕ್ಕಳ ಸಾಮೂಹಿಕ ಹುಟ್ಟು ಹಬ್ಬ ಆಚರಿಸಲಾಯಿತು. ವಿಶೇಷವಾಗಿ ಸಂಸ್ಥೆಯ ಸದಸ್ಯರು ಮಾತೃ ಪಾದಪೂಜೆಯನ್ನು ಮಾಡಿದಾಗ ನೆರೆದ ಜನಸಮೂಹ ಮೂಕ ಪ್ರೇಕ್ಷಕರಾಗಿ ಆನಂದ ಬಾಷ್ಪ ಸುರಿಸಿದ ಕ್ಷಣ ಬಹಳಷ್ಟು ಪ್ರೇರಣೆಯಾಗಿತ್ತು.


ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾದ ವಿವೇಕಾನಂದ ವಿದ್ಯಾವರ್ಧಕದ ಸಂಘದ ಎ.ಸಿ.ಇ.ಓ, ವೆಂಕಟರಮಣ ರಾವ್ ಮಾತನಾಡಿ ಶಿಶು ಮಂದಿರದ ಶಿಕ್ಷಣದ ಅಗತ್ಯತೆಯ ಬಗ್ಗೆ ತಿಳಿಸಿದರು. ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಸಂಸ್ಥೆಯ ಸದಸ್ಯರ ಶ್ರಮ, ಪ್ರಯತ್ನ ಹಾಗೂ ಈ ಧರ್ಮ ರಾಷ್ಟ್ರೀಯ ಸೇವೆಯ ಕಾರ್ಯವನ್ನು ಶ್ಲಾಘಿಸಿದರು.
ಶಿಶು ಮಂದಿರದ ಮಹಾ ಪೋಷಕರಾದ ಪುತ್ತೂರು ದೇವರಾತ ಭಟ್ ಮಾತಾಜಿಯವರ ಪೋಷಕರ ಕಾಳಜಿಯ ಬಗ್ಗೆ ಆಸಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಭಾಧ್ಯಕ್ಷ ಸಂಚಾಲಕರು ನೇಮಿಚಂದ್ರ ಮುಗೇರಡ್ಕ ಸಂಸ್ಥೆಯ ಸದಸ್ಯರು ಮಾಡಿದ ಪಾದ ಪೂಜೆ ಪ್ರದರ್ಶನವಲ್ಲ ಇದು ಸಮಾಜಕ್ಕೆ ಬದಲಾವಣೆಯ ನಿದರ್ಶನ ಹಾಗೆಯೇ ಸಂಘಟನೆಯನ್ನು ಕಟ್ಟಿ ಸಮಾಜವನ್ನು ಬದಲಾಯಿಸೋಣ ಎಂದು ಹೊರಟ ಸದಸ್ಯರು, ಬದಲಾವಣೆ ನಮ್ಮಿಂದಲೇ ಆಗಲಿ ಎನ್ನುವ ಮಾತಿನೊಂದಿಗೆ ತಮ್ಮ ತಾಯಂದಿರ ಪಾದಪೂಜೆಯನ್ನು ಸಲ್ಲಿಸಿದರು.


ಅಶ್ವಿತ್ ಕೆ ಪ್ರಾಸ್ತಾವಿಕ ಭಾಷಣ ಮಾಡಿದರು, ಶಿಶು ಮಂದಿರದ ಮಾತಾಜಿಯಾದ ಪುಷ್ಪಲತ ಸ್ವಾಗತಿಸಿ, ಅಧ್ಯಕ್ಷ ಅಶೋಕ್ ಬಿ ಧನ್ಯವಾದವಿತ್ತರು.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಉದಯ ಭಟ್ ಕೊಳಬ್ಬೆ, ಬಂದಾರು ಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೇವಾ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ಶಿಶು ಮಂದಿರದ ಮಾತಾಜಿಯವರು, ಜೈ ಶ್ರೀ ರಾಮ್ ಮಹಿಳಾ ಮಂಡಳಿಯವರು, ಮಾತೃ ಮಂಡಳಿಯವರು, ಪೋಷಕರು, ಊರ ಪರವೂರ ಶಿಶು ಮಂದಿರದ ಅಭಿಮಾನಿಗಳು ಭಾಗವಹಿಸಿದ್ದರು.
ಶಿಶು ಮಂದಿರದ ಮಕ್ಕಳಿಂದ ಮಾತೃ ಮಂಡಳಿ ಮಹಿಳಾ ಮಂಡಳಿ ಸದಸ್ಯರಿಂದ, ಪೋಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya
error: Content is protected !!