July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿಗೆ ಜಪಾನ್ ದೇಶದ ಟೋಕಿಯೋದಲ್ಲಿರುವ ಹಿರಿಯ ಪ್ರೋ. ಮಾಸ ಕಟಾಒಕ ಮತ್ತು ಕಾಂಬೋಡಿಯಾ ದೇಶದ ಸಂಸ್ಕೃತಿ ಸಚಿವಾಲಯದ ಸಂಸ್ಕೃತಿ ಮತು ಫೈನ್ ಆರ್ಟ್ಸ್ ಡೆಪ್ಯುಟಿ ಮಿನಿಸ್ಟರ್ ಇಕೆ ಬುಂತ ಭೇಟಿ ನೀಡಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ಉಜಿರೆಯ‌ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಸಹಕಾರದಲ್ಲಿ ಕಂಬೋಡಿಯ ಮತ್ತು ಜಪಾನ್ ದೇಶದ ವಿದ್ಯಾರ್ಥಿಗಳು ಆಗಮಿಸಿ 7 ದಿನಗಳ ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದರು. ಈ ವರ್ಷವೂ ಎಸ್.ಡಿ.ಎಂ ಸಂಸ್ಥೆಯೊಂದಿಗೆ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವನ್ನು ಆಯೋಜಿಸಬಹುದಾದ ಸಾಧ್ಯತೆಯನ್ನು ಅನ್ವೇಷಿಸಲು ತಂಡವು ಆಗಮಿಸಿದೆ.
ಭೇಟಿಯ ಸಂದರ್ಭದಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ಸಂಪರ್ಕ, ಸಂಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಸಾಧ್ಯತೆಗಳು, ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರಾಸ್ತಾವಿಕ ಚರ್ಚೆಗಳು ಇತ್ಯಾದಿ ವಿಷಯಗಳನ್ನು ಪ್ರಸ್ತಾಪಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ ಬರಮಾಡಿಕೊಂಡರು. ಈ ವೇಳೆ ಉಪ ಪ್ರಾಂಶುಪಾಲರಾದ ನಂದ ಕುಮಾರಿ, ಆಡಳಿತ ವಿಭಾಗದ ರಿಜಿಸ್ಟ್ರಾರ್  ಡಾ. ಶ್ರೀಧರ ಭಟ್‌, ಪರೀಕ್ಷಾಂಗ ಕುಲಸಚಿವ ಗಣೇಶ್ ನಾಯಕ್, ಐಕ್ಯುಎಸ್ ಸಂಯೋಜಕ ಗಜಾನನ ಭಟ್ ಸೇರಿದಂತೆ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದ ಪೂರ್ವಭಾವಿ ಭೇಟಿಯನ್ನು ಸಿಡ್ಲ್ಯುಸಿ ಅಂತಾರಾಷ್ಟ್ರೀಯ ಸಂಸ್ಥೆಯ ಸಲಹೆಗಾರ್ತಿ ಮನೋರಮಾ ಭಟ್ ಸಂಯೋಜಿಸಿದರು.

ಮಲ್ಟಿಮೀಡಿಯಾ ಸ್ಟುಡಿಯೋ ಮತ್ತು ಕಲಾಕೇಂದ್ರಕ್ಕೆ ಭೇಟಿ :

ಕಾಲೇಜಿನ ಕೇಂದ್ರ ಕಛೇರಿ ಭೇಟಿಯ ಬಳಿಕ ತಂಡವು ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಲ್ಟಿಮೀಡಿಯಾ ಸ್ಟುಡಿಯೋಗೆ ಭೇಟಿ ನೀಡಿದರು. ವಿದ್ಯಾರ್ಥಿಗಳ ಪ್ರಾಯೋಗಿಕ ಚಟುವಟಿಕೆಗಳಾದ ಚಿಗುರು, ನಮ್ಮೂರ ವಾರ್ತೆ ಇತ್ಯಾದಿಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಕಮ್ಯುನಿಟಿ ರೇಡಿಯೋ ನಿನಾದಕ್ಕೆ ಭೇಟಿ ನೀಡಿ ಒಂದು ಗಂಟೆಯ ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ಮತ್ತು ಶಿಕ್ಷಣದ ಕುರಿತು ಸಂದರ್ಶನವನ್ನು ನೀಡಿದರು. ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗಡೆ ಸೇರಿದಂತೆ ಸುನಿಲ್ ಹೆಗ್ಡೆ, ವಿ.ಕೆ ಕಡಬ ಮತ್ತು ಸಂಹಿತ ಮೈಸೂರೆ ಉಪಸ್ಥಿತರಿದ್ದರು. ಬಳಿಕ ಕಾಲೇಜಿನ ಕಲಾ ಕೇಂದ್ರ ವಿಭಾಗಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ವೀಕ್ಷಿಸಿದರು. ವಿದ್ಯಾರ್ಥಿಗಳ ವಿವಿಧ ಪ್ರಕಾರಗಳ ನೃತ್ಯ, ನಾಟಕ , ಯಕ್ಷಗಾನ ಸಾಂಸ್ಕೃತಿಕ ಅಭ್ಯಾಸ ಮತ್ತು ತರಬೇತಿಯನ್ನು ಕಂಡು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಕಲಾ ಕೇಂದ್ರ ವಿಭಾಗದ ಸಂಯೋಜಕ ತೃಪ್ತ ಕುಮಾರ್ ಜೈನ್ ಸೇರಿದಂತೆ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!