23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆಯು ಫೆ. 18 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು ವಹಿಸಿದರು. ಭಾರತೀಯ ಯುವ ಜೆಸಿ ವಿಭಾಗದ ಪದಗ್ರಹಣವನ್ನು ನಡೆಸಲು ನಿರ್ಧರಿಸಲಾಯಿತು. ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಿಕಟಪೂರ್ವ ಅಧ್ಯಕ್ಷೆ ಡಾ. ಶೋಭಾ ಪಿ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಕೋಶಾಧಿಕಾರಿಗಳಾದ ಪ್ರಜ್ವಲ್ ಲೋಬೊ ಅವರು ವಾರ್ಷಿಕ ಸದಸ್ಯತ್ವ ಶುಲ್ಕದ ಮಾಹಿತಿ ನೀಡಿದರು. ಪೂರ್ವಾಧ್ಯಕ್ಷರಾದ ಸಂತೋಷ್ ಜೈನ್ ಅವರನ್ನು ಯುವ ಜೆಸಿ ವಿಭಾಗದ ನಿರ್ದೇಶಕರನ್ನಾಗಿ ಆರಿಸಲಾಯಿತು. ಇತ್ತೀಚೆಗೆ ನಿಧನರಾದ ಖ್ಯಾತ ವೈದ್ಯ ಡಾ. ಟಿ. ವಿ. ಜೋಸೆಫ್ ಅವರ ಗೌರವಾರ್ಥ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು.

ಮಾರ್ಚ್ ತಿಂಗಳಲ್ಲಿ ವಲಯ ಉಪಾಧ್ಯಕ್ಷರ ಅಧಿಕೃತ ಭೇಟಿಗೆ ತಯಾರಿ ನಡೆಸಲಾಯಿತು. ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ಆಯುಷ್ ಜೈನ್ ಅವರು ವಾಚಿಸಿದರು. ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ಜಸ್ವಂತ್ ಪಿರೇರಾ, ರೇಷ್ಮಾ ಡಿ ಅಲ್ಮೇಡಾ, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ, ದಕ್ಷಾ ಜೈನ್, ವಿಕ್ಟರ್ ಸುವಾರಿಸ್, ದೀಪಾ ವಿ., ಲೇಡಿ ಜೆಸಿ ಅಧ್ಯಕ್ಷರಾದ ರೇಶ್ಮಿ ಡಿಸೋಜ, ಯುವ ಜೆಸಿ ಅಧ್ಯಕ್ಷರಾದ ಆದ್ಯಾ ಜೈನ್, ಧನುಷ್ ಕುಮಾರ್ ಜೈನ್, ಅಕ್ಷತ್ ರೈ, ನಿತ್ಯಾನಂದ ರೈ, ವಿದ್ಯೇಂದ್ರ ಅವರು ಚರ್ಚೆಯಲ್ಲಿ ಭಾಗವಹಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ಅವರು ವಂದಿಸಿದರು.

Related posts

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

Suddi Udaya
error: Content is protected !!