September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆಯು ಫೆ. 18 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು ವಹಿಸಿದರು. ಭಾರತೀಯ ಯುವ ಜೆಸಿ ವಿಭಾಗದ ಪದಗ್ರಹಣವನ್ನು ನಡೆಸಲು ನಿರ್ಧರಿಸಲಾಯಿತು. ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಿಕಟಪೂರ್ವ ಅಧ್ಯಕ್ಷೆ ಡಾ. ಶೋಭಾ ಪಿ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಕೋಶಾಧಿಕಾರಿಗಳಾದ ಪ್ರಜ್ವಲ್ ಲೋಬೊ ಅವರು ವಾರ್ಷಿಕ ಸದಸ್ಯತ್ವ ಶುಲ್ಕದ ಮಾಹಿತಿ ನೀಡಿದರು. ಪೂರ್ವಾಧ್ಯಕ್ಷರಾದ ಸಂತೋಷ್ ಜೈನ್ ಅವರನ್ನು ಯುವ ಜೆಸಿ ವಿಭಾಗದ ನಿರ್ದೇಶಕರನ್ನಾಗಿ ಆರಿಸಲಾಯಿತು. ಇತ್ತೀಚೆಗೆ ನಿಧನರಾದ ಖ್ಯಾತ ವೈದ್ಯ ಡಾ. ಟಿ. ವಿ. ಜೋಸೆಫ್ ಅವರ ಗೌರವಾರ್ಥ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು.

ಮಾರ್ಚ್ ತಿಂಗಳಲ್ಲಿ ವಲಯ ಉಪಾಧ್ಯಕ್ಷರ ಅಧಿಕೃತ ಭೇಟಿಗೆ ತಯಾರಿ ನಡೆಸಲಾಯಿತು. ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ಆಯುಷ್ ಜೈನ್ ಅವರು ವಾಚಿಸಿದರು. ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ಜಸ್ವಂತ್ ಪಿರೇರಾ, ರೇಷ್ಮಾ ಡಿ ಅಲ್ಮೇಡಾ, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ, ದಕ್ಷಾ ಜೈನ್, ವಿಕ್ಟರ್ ಸುವಾರಿಸ್, ದೀಪಾ ವಿ., ಲೇಡಿ ಜೆಸಿ ಅಧ್ಯಕ್ಷರಾದ ರೇಶ್ಮಿ ಡಿಸೋಜ, ಯುವ ಜೆಸಿ ಅಧ್ಯಕ್ಷರಾದ ಆದ್ಯಾ ಜೈನ್, ಧನುಷ್ ಕುಮಾರ್ ಜೈನ್, ಅಕ್ಷತ್ ರೈ, ನಿತ್ಯಾನಂದ ರೈ, ವಿದ್ಯೇಂದ್ರ ಅವರು ಚರ್ಚೆಯಲ್ಲಿ ಭಾಗವಹಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ಅವರು ವಂದಿಸಿದರು.

Related posts

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya
error: Content is protected !!