ಬೆಳ್ತಂಗಡಿ: ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಬಿಜೆಪಿಯ ಕಾರ್ಯಕರ್ತ ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಭಾರತೀಯ ಜನಸಂಘದ ಹಿರಿಯ ಕಾರ್ಯಕರ್ತ ತೆಂಕಕಜೆಕಾರು, ಬಡಗಕಜೆಕಾರು ಹಾಗೂ ಸರಪಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬಿಜೆಪಿಯ ಆಧಾರಸ್ತಂಭವಾಗಿ ಜನಸಾಮಾನ್ಯರ ನೋವು ನಲಿವುಗಳಿಗೆ ಸದಾ ಸ್ಪಂದಿಸಿ, ಜನಪರವಾದ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡು ಜನನಾಯಕರೆನಿಸಿಕೊಂಡಿದ್ದರು.
ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಜನಪ್ರತಿನಿಧಿಯಾಗಿ, ಸಹಕಾರಿ ಕ್ಷೇತ್ರದಲ್ಲಿಯೂ ಸೈ ಎನಿಸಿಕೊಂಡಿದ್ದ ಹರಿಶ್ಚಂದ್ರ ಪೂಜಾರಿ ಕಜೆಕಾರುರವರು ದೀರ್ಘಕಾಲದ ಅಸೌಖ್ಯದಿಂದ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ, ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಅವರು ಸಂತಾಪ ಸೂಚಿಸಿದ್ದಾರೆ.
ಜೊತೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕ ಎ.ರುಕ್ಷ್ಮಯ ಪೂಜಾರಿ, ಪದ್ಮನಾಭಕೊಟ್ಟಾರಿ,ಬಿ.ನಾಗರಾಜ ಶೆಟ್ಟಿ, ಪ್ರಮುಖರಾದ ತುಂಗಪ್ಪ ಬಂಗೇರ, ಹರಿಕೃಷ್ಣ ಬಂಟ್ವಾಳ, ದೇವದಾಸ್ ಶೆಟ್ಟಿ, ರಾಮದಾಸ್ ಬಂಟ್ವಾಳ, ಚೆನ್ನಪ್ಪ ಆರ್.ಕೋಟ್ಯಾನ್, ಸುಲೋಚನ ಜಿ.ಕೆ.ಭಟ್, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.











