23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನಬೆಳ್ತಂಗಡಿವರದಿ

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

ಬೆಳ್ತಂಗಡಿ: ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಬಿಜೆಪಿಯ ಕಾರ್ಯಕರ್ತ ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಭಾರತೀಯ ಜನಸಂಘದ ಹಿರಿಯ ಕಾರ್ಯಕರ್ತ ತೆಂಕಕಜೆಕಾರು, ಬಡಗಕಜೆಕಾರು ಹಾಗೂ ಸರಪಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬಿಜೆಪಿಯ ಆಧಾರಸ್ತಂಭವಾಗಿ ಜನಸಾಮಾನ್ಯರ ನೋವು ನಲಿವುಗಳಿಗೆ ಸದಾ ಸ್ಪಂದಿಸಿ, ಜನಪರವಾದ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡು ಜನನಾಯಕರೆನಿಸಿಕೊಂಡಿದ್ದರು.

ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಜನಪ್ರತಿನಿಧಿಯಾಗಿ, ಸಹಕಾರಿ ಕ್ಷೇತ್ರದಲ್ಲಿಯೂ ಸೈ ಎನಿಸಿಕೊಂಡಿದ್ದ ಹರಿಶ್ಚಂದ್ರ ಪೂಜಾರಿ ಕಜೆಕಾರುರವರು ದೀರ್ಘಕಾಲದ ಅಸೌಖ್ಯದಿಂದ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ, ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಅವರು ಸಂತಾಪ ಸೂಚಿಸಿದ್ದಾರೆ.

ಜೊತೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕ ಎ.ರುಕ್ಷ್ಮಯ ಪೂಜಾರಿ, ಪದ್ಮನಾಭಕೊಟ್ಟಾರಿ,ಬಿ.ನಾಗರಾಜ ಶೆಟ್ಟಿ, ಪ್ರಮುಖರಾದ ತುಂಗಪ್ಪ ಬಂಗೇರ, ಹರಿಕೃಷ್ಣ ಬಂಟ್ವಾಳ, ದೇವದಾಸ್ ಶೆಟ್ಟಿ, ರಾಮದಾಸ್ ಬಂಟ್ವಾಳ, ಚೆನ್ನಪ್ಪ ಆರ್.ಕೋಟ್ಯಾನ್, ಸುಲೋಚನ ಜಿ.ಕೆ.ಭಟ್, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Related posts

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya
error: Content is protected !!