30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

ಬೆಳ್ತಂಗಡಿ: ಭಾರತೀಯ ಪ್ರತಿಷ್ಠಿತ ಸಂಸ್ಥೆಗಳಾದ ಎನ್‌ಐಟಿ ಹಾಗೂ ಐಐಐಟಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಜೆಇಇ (ಮೇನ್ಸ್)- 2026 ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ತೋರಿದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಹಾಗೂ ಪ್ರತೀಕ್ ವಿ.ಎಸ್. ಅವರನ್ನು ವಿದ್ವತ್ ಕಾಲೇಜು ಪ್ರತಿಷ್ಠಾನದಿಂದ ಫೆ.17 ರಂದು ಗೌರವಿಸಲಾಯಿತು.

ಚಿನ್ಮಯ್ ಜಿ.ಕೆ. ಶೇ.99.6465 ಫಲಿತಾಂಶ ದಾಖಲಿಸಿದ್ದು, ಪ್ರತೀಕ್ ವಿ.ಎಸ್. ಶೇ.99.5473 ಪರ್ಸೆಂಟೈಲ್ ಪಡೆದಿರುವ ಹಿನ್ನೆಲೆ ವಿದ್ಯಾರ್ಥಿಗಳ ಸಾಧನೆಯನ್ನು ಪರಿಗಣಿಸಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಶ್ರೀ ಪ್ರಜ್ವಲ್ ರೈ ಮನೆಗೆ ತೆರಳಿ ಅಭಿನಂದಿಸಿ ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು. ಈ ವೇಳೆ ಚಿನ್ಮಯ್ ಜಿ.ಕೆ. ಪೋಷಕರಾದ ಗಣೇಶ್ ಭಟ್, ಮಾಲಿನಿ ಹೆಗಡೆ, ಪ್ರತೀಕ್ ವಿ.ಎಸ್. ಪೋಷಕರಾದ ವಸಂತ್ ಶೆಟ್ಟಿ, ಶಾಲಿನಿ ವಿ.ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಈ ವೇಳೆ ಶೈಕ್ಷಣಿಕ ನಿರ್ದೇಶಕರಾದ ಶ್ರೀ ಗಂಗಾಧರ ಮಂಡಗಳಲೆ, ಆಡಳಿತಾಧಿಕಾರಿ ಅಶೋಕ ಕುಮಾರ್ ಶೆಟ್ಟಿ, ಪ್ರಾಂಶುಪಾಲರಾದ ಹರೀಶ್ ಕೆ.ಆರ್., ಉಪನ್ಯಾಸಕರಾದ ಪ್ರತಾಪ್ ದೊಡ್ಡಮನೆ, ರಂಗನಾಥ್ ಆರ್., ಪಿ.ಆರ್‌.ಒ ಚೈತ್ರೇಶ್ ಸಿ. ಉಪಸ್ಥಿತರಿದ್ದರು.

ಚೊಚ್ಚಲ ಪ್ರಯತ್ನದಲ್ಲಿ ಸಾಧನೆ: ವಿದ್ವತ್ ಕಾಲೇಜಿಂದ ಪ್ರಥಮ ಬಾರಿಗೆ ಜೆಇಇ ಪರೀಕ್ಷೆಗೆ ಹಾಜರಾದ 35 ವಿದ್ಯಾರ್ಥಿಗಳ ಪೈಕಿ ಚಿನ್ಮಯ್ ಜಿ.ಕೆ., ಹಾಗೂ ಪ್ರತೀಕ್ ವಿ.ಎಸ್. ಶೇ.99 ಪರ್ಸೆಂಟೈಲ್ ಪಡೆದು ರಾಜ್ಯದಲ್ಲೇ ಗರಿಷ್ಠ ಸಾಧನೆ ತೋರಿದ್ದು,ಉಳಿದಂತೆ 21 ಮಂದಿ ಶೇ.90 ಕ್ಕಿಂತ ಅಧಿಕ ಪರ್ಸೆಂಟೈಲ್ ಪಡೆಯುವ ಮೂಲಕ ಚೊಚ್ಚಲ ಪ್ರಯತ್ನದಲ್ಲಿ ಈ ಸಾಧನೆ ಮಾಡಿದ ರಾಜ್ಯದ ಏಕೈಕ ಕಾಲೇಜೆಂಬ ಹೆಗ್ಗಳಿಕೆ ಪಾತ್ರವಾಗಿದೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya
error: Content is protected !!