July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

ಕಾಶಿಪಟ್ಣ: ಕಾಶಿಪಟ್ಣ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಕುಜಂಬೆ ರಸ್ತೆಯವರೆಗೆ ಡಾಂಬರೀಕರಣಗೊಳಿಸಲು ಶಾಸಕ ಹರೀಶ್ ಪೂಂಜರವರು ಅನುದಾನ ಒದಗಿಸಿದ್ದಾರೆ. ಈ ರಸ್ತೆಯ ಅಭಿವೃದ್ಧಿಯು ಸ್ಥಳೀಯರ ಮತ್ತು ಭಕ್ತಾದಿಗಳ ಬಹುಕಾಲದ ಬೇಡಿಕೆಯಾಗಿತ್ತು.

ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ರಸ್ತೆ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಲಾಯಿತು. ಈ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜ ಅವರು ಅನುದಾನ ಬಿಡುಗಡೆ ಮಾಡಿರುವುದಕ್ಕೆ ಸ್ಥಳೀಯರು ಮತ್ತು ಬಿಜೆಪಿ ಶಕ್ತಿಕೇಂದ್ರ ಕಾಶಿಪಟ್ಣದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಶಿಲಾನ್ಯಾಸ ನೆರವೇರಿಸಿದ ಮರೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತ್ನಾಕರ್ ಬನ್ನನ್ ಹಾಗೂ ಕಾಮಗಾರಿಗೆ ಸಹಕರಿಸಿದ ಕಾಶಿಪಟ್ಣ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಅಶೋಕ್ ಕುಮಾರ್ ಜೈನ್, ರವೀಂದ್ರ ಪಿ., ಸವಿತಾ ನಡ್ಡ ಇವರೆಲ್ಲರಿಗೂ ಗ್ರಾಮಸ್ಥರು ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ. ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಸುಧಾರಣೆಯತ್ತ ಶಾಸಕರು ತೋರುತ್ತಿರುವ ಈ ಆಸಕ್ತಿಯು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya
error: Content is protected !!