30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

ಕಾಶಿಪಟ್ಣ: ಕಾಶಿಪಟ್ಣ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಕುಜಂಬೆ ರಸ್ತೆಯವರೆಗೆ ಡಾಂಬರೀಕರಣಗೊಳಿಸಲು ಶಾಸಕ ಹರೀಶ್ ಪೂಂಜರವರು ಅನುದಾನ ಒದಗಿಸಿದ್ದಾರೆ. ಈ ರಸ್ತೆಯ ಅಭಿವೃದ್ಧಿಯು ಸ್ಥಳೀಯರ ಮತ್ತು ಭಕ್ತಾದಿಗಳ ಬಹುಕಾಲದ ಬೇಡಿಕೆಯಾಗಿತ್ತು.

ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ರಸ್ತೆ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಲಾಯಿತು. ಈ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜ ಅವರು ಅನುದಾನ ಬಿಡುಗಡೆ ಮಾಡಿರುವುದಕ್ಕೆ ಸ್ಥಳೀಯರು ಮತ್ತು ಬಿಜೆಪಿ ಶಕ್ತಿಕೇಂದ್ರ ಕಾಶಿಪಟ್ಣದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಶಿಲಾನ್ಯಾಸ ನೆರವೇರಿಸಿದ ಮರೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತ್ನಾಕರ್ ಬನ್ನನ್ ಹಾಗೂ ಕಾಮಗಾರಿಗೆ ಸಹಕರಿಸಿದ ಕಾಶಿಪಟ್ಣ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಅಶೋಕ್ ಕುಮಾರ್ ಜೈನ್, ರವೀಂದ್ರ ಪಿ., ಸವಿತಾ ನಡ್ಡ ಇವರೆಲ್ಲರಿಗೂ ಗ್ರಾಮಸ್ಥರು ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ. ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಸುಧಾರಣೆಯತ್ತ ಶಾಸಕರು ತೋರುತ್ತಿರುವ ಈ ಆಸಕ್ತಿಯು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya
error: Content is protected !!