22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ನಾಡು-ನುಡಿ, ಕಲೆ ಮತ್ತು ಸಂಸ್ಕೃತಿಯ ಸೇವೆ ಸಲ್ಲಿಸುವ ಉದ್ದೇಶದಿಂದ ಬೆಳ್ತಂಗಡಿಯಲ್ಲಿ ಹುಟ್ಟಿಕೊಂಡ ಸಂಸ್ಥೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ, ಸಾಂಸ್ಕೃತಿಕ ಚಿಂತಕ ಸಂಪತ್ ಬಿ.ಸುವರ್ಣ ಅವರ ಸಾರಥ್ಯದ ಪ್ರತಿಷ್ಠಾನವು 16 ವರ್ಷಗಳಿಂದ ನಿರಂತರ ಕಲೆ-ಸಂಸ್ಕೃತಿಗೆ ಸಂಬಂಧಿಸಿದ ಹತ್ತು ಹಲವು ಕಾರ್ಯಕ್ರಮ ಹಮ್ಮಿಕೊಂಡು ಜನ ಮಾನಸದಲ್ಲಿ ಬೇರೂರಿದೆ.

ಈ ಪ್ರತಿಷ್ಠಾನದಿಂದ ಕುತ್ಯಾರು ಶ್ರೀ ಸೋಮನಾಥ್ವೇಶರ ದೇವಸ್ಥಾನದ ಜಾತ್ರೆ ಪ್ರಯುಕ್ತ 16 ನೇ ವರ್ಷದ ಸಾಂಸ್ಕೃತಿಕ ವೈಭವವು ಫೆ.19 ರಂದು ಬೆಳ್ತಂಗಡಿ ಸಂತೆಕಟ್ಟೆ ಮಾರಿಗುಡಿ ಮೈದಾನದಲ್ಲಿ ನಡೆಯಲಿದೆ.


ಉರ್ವ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಸಾಯಿ ಶಕ್ತಿ ಕಲಾಬಳಗ ಅಭಿನಯಿಸುವ ಜೋಡು ಜೀಟಿಗೆ ಸತ್ಯೋದ ಸಾದಿಗ್ ಧರ್ಮೊದ ಬೊಲ್ಪು ತುಳು ಜನಪದ ನಾಟಕ ಪ್ರದರ್ಶನಗೊಳ್ಳಲಿದೆ. ಹಿರಿಯ ಯಕ್ಷಗಾನ ಕಲಾವಿದ ಕೊಳ್ತಿಗೆ ನಾರಾಯಣ ಗೌಡ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಘಟಕ ಡಾ.ಪ್ರದೀಪ್ ಆಟಿಕುಕ್ಕೆ ಹಾಗೂ ಸಿನಿಮಾ ಛಾಯಾಗ್ರಹಣಗಾರ ಸಂತೋಷ್ ಆಚಾರ್ಯ ಗುಂಪಲಾಜೆ ಅವರಿಗೆ ಸುವರ್ಣ ರಂಗ ಸಮ್ಮಾನ್-೨೦೨೬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
೨೦೧೧ರಲ್ಲಿ ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಂದ ಉದ್ಘಾಟನೆಗೊಂಡ ಪ್ರತಿಷ್ಠಾನ ನಿರಂತರ ಕಲಾರಾಧನೆಯಲ್ಲಿ ತೊಡಗಿಸಿಕೊಂಡಿದೆ. ಸಾಂಸ್ಕೃತಿಕ ಚಟುವಟಿಕೆ ವಿರಳವಿರುವ ಬೆಳ್ತಂಗಡಿ ಪರಿಸರದಲ್ಲಿ ಕಲಾಪ್ರೇಮಿಗಳ ಮನ ತಣಿಸುತ್ತಾ ಬರುತ್ತಿದೆ. ವಿಭಿನ್ನ ಮತ್ತು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ. ಹಲವು ಕಲಾವಿದರನ್ನು ಕಿರುತೆರೆಗೆ, ಬೆಳ್ಳಿತೆರೆಗೆ ಪರಿಚಯಿಸಿದ ಶ್ರೇಯಸ್ಸು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನಕ್ಕೆ ಸಲ್ಲುತ್ತದೆ.

ಜನಪದೀಯ ಬೇರುಗಳನ್ನು ಮುಂದಿನ ತಲೆಮಾರಿಗೆ ತಿಳಿಸುವ ಕಾರ್ಯ:
ಭಾರತದ ನೈಜ ಸಾಂಸ್ಕೃತಿಕ ವಿಶ್ವರೂಪ ದರ್ಶನವನ್ನು ಯುವ ಮನಸ್ಸುಗಳನ್ನು ಸಾಂಸ್ಕೃತಿಕವಾಗಿ ಕಟ್ಟದೆ ಹೋದಲ್ಲಿ ಭಾರತದ ನೈಜ ಸಾಂಸ್ಕೃತಿಕ ವಿಶ್ವರೂಪ ದರ್ಶನ ದೊರೆಯಲು ಸಾಧ್ಯವಿಲ್ಲ. ಆಗಾಗಿ ವ್ಯಕ್ತಿಯೋರ್ವನ ಸಾಂಸ್ಕೃತಿಕ ಮನಸ್ಸುನ್ನು ಕಟ್ಟುವ ಆಂತರಿಕ ಅಭಿವೃದ್ಧಿ ಕಾರ್ಯವನ್ನು ಮಾಡುವುದರೊಂದಿಗೆ ಈ ನೆಲದ ಮಣ್ಣಿನ ಜೀವಂತಿಕೆಯನ್ನು, ಅದರ ಸಾರವನ್ನು, ಈ ದೇಶ ಪ್ರತಿಪಾದಿಸಿದ ಜೀವನ ಮೌಲ್ಯವನ್ನು ತಿಳಿಸುವ ಪ್ರಯತ್ನವೆ ಸಾಂಸ್ಕೃತಿಕ ಪ್ರತಿಷ್ಠಾನದ ಉದ್ದೇಶವಾಗಿದೆ. ಕಳೆದ ೧೫ ವರ್ಷಗಳಿಂದ ಇದೇ ವಿಚಾರದಲ್ಲಿ ನಂಬಿಕೆಯಿಟ್ಟು ಬೆಳೆದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ಕಾರ್ಯ ನಡೆಸುತ್ತಿದೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ.ಸುವರ್ಣ ತಿಳಿಸಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಅಭಿಯಾನ: ಕ್ಷಣಿಕ ಸುಖಕ್ಕೆ, ಶಾಶ್ವತ ಸುಖ ಕಳೆದು ಕೊಳ್ಳಬೇಡಿ: ಬಿ. ಸೋಮಶೇಖರ ಶೆಟ್ಟಿ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya
error: Content is protected !!