27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿಗೆ ಜಪಾನ್ ದೇಶದ ಟೋಕಿಯೋದಲ್ಲಿರುವ ಹಿರಿಯ ಪ್ರೋ. ಮಾಸ ಕಟಾಒಕ ಮತ್ತು ಕಾಂಬೋಡಿಯಾ ದೇಶದ ಸಂಸ್ಕೃತಿ ಸಚಿವಾಲಯದ ಸಂಸ್ಕೃತಿ ಮತು ಫೈನ್ ಆರ್ಟ್ಸ್ ಡೆಪ್ಯುಟಿ ಮಿನಿಸ್ಟರ್ ಇಕೆ ಬುಂತ ಭೇಟಿ ನೀಡಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ಉಜಿರೆಯ‌ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಸಹಕಾರದಲ್ಲಿ ಕಂಬೋಡಿಯ ಮತ್ತು ಜಪಾನ್ ದೇಶದ ವಿದ್ಯಾರ್ಥಿಗಳು ಆಗಮಿಸಿ 7 ದಿನಗಳ ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದರು. ಈ ವರ್ಷವೂ ಎಸ್.ಡಿ.ಎಂ ಸಂಸ್ಥೆಯೊಂದಿಗೆ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವನ್ನು ಆಯೋಜಿಸಬಹುದಾದ ಸಾಧ್ಯತೆಯನ್ನು ಅನ್ವೇಷಿಸಲು ತಂಡವು ಆಗಮಿಸಿದೆ.
ಭೇಟಿಯ ಸಂದರ್ಭದಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ಸಂಪರ್ಕ, ಸಂಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಸಾಧ್ಯತೆಗಳು, ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರಾಸ್ತಾವಿಕ ಚರ್ಚೆಗಳು ಇತ್ಯಾದಿ ವಿಷಯಗಳನ್ನು ಪ್ರಸ್ತಾಪಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ ಬರಮಾಡಿಕೊಂಡರು. ಈ ವೇಳೆ ಉಪ ಪ್ರಾಂಶುಪಾಲರಾದ ನಂದ ಕುಮಾರಿ, ಆಡಳಿತ ವಿಭಾಗದ ರಿಜಿಸ್ಟ್ರಾರ್  ಡಾ. ಶ್ರೀಧರ ಭಟ್‌, ಪರೀಕ್ಷಾಂಗ ಕುಲಸಚಿವ ಗಣೇಶ್ ನಾಯಕ್, ಐಕ್ಯುಎಸ್ ಸಂಯೋಜಕ ಗಜಾನನ ಭಟ್ ಸೇರಿದಂತೆ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದ ಪೂರ್ವಭಾವಿ ಭೇಟಿಯನ್ನು ಸಿಡ್ಲ್ಯುಸಿ ಅಂತಾರಾಷ್ಟ್ರೀಯ ಸಂಸ್ಥೆಯ ಸಲಹೆಗಾರ್ತಿ ಮನೋರಮಾ ಭಟ್ ಸಂಯೋಜಿಸಿದರು.

ಮಲ್ಟಿಮೀಡಿಯಾ ಸ್ಟುಡಿಯೋ ಮತ್ತು ಕಲಾಕೇಂದ್ರಕ್ಕೆ ಭೇಟಿ :

ಕಾಲೇಜಿನ ಕೇಂದ್ರ ಕಛೇರಿ ಭೇಟಿಯ ಬಳಿಕ ತಂಡವು ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮಲ್ಟಿಮೀಡಿಯಾ ಸ್ಟುಡಿಯೋಗೆ ಭೇಟಿ ನೀಡಿದರು. ವಿದ್ಯಾರ್ಥಿಗಳ ಪ್ರಾಯೋಗಿಕ ಚಟುವಟಿಕೆಗಳಾದ ಚಿಗುರು, ನಮ್ಮೂರ ವಾರ್ತೆ ಇತ್ಯಾದಿಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಕಮ್ಯುನಿಟಿ ರೇಡಿಯೋ ನಿನಾದಕ್ಕೆ ಭೇಟಿ ನೀಡಿ ಒಂದು ಗಂಟೆಯ ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ಮತ್ತು ಶಿಕ್ಷಣದ ಕುರಿತು ಸಂದರ್ಶನವನ್ನು ನೀಡಿದರು. ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗಡೆ ಸೇರಿದಂತೆ ಸುನಿಲ್ ಹೆಗ್ಡೆ, ವಿ.ಕೆ ಕಡಬ ಮತ್ತು ಸಂಹಿತ ಮೈಸೂರೆ ಉಪಸ್ಥಿತರಿದ್ದರು. ಬಳಿಕ ಕಾಲೇಜಿನ ಕಲಾ ಕೇಂದ್ರ ವಿಭಾಗಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ವೀಕ್ಷಿಸಿದರು. ವಿದ್ಯಾರ್ಥಿಗಳ ವಿವಿಧ ಪ್ರಕಾರಗಳ ನೃತ್ಯ, ನಾಟಕ , ಯಕ್ಷಗಾನ ಸಾಂಸ್ಕೃತಿಕ ಅಭ್ಯಾಸ ಮತ್ತು ತರಬೇತಿಯನ್ನು ಕಂಡು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಕಲಾ ಕೇಂದ್ರ ವಿಭಾಗದ ಸಂಯೋಜಕ ತೃಪ್ತ ಕುಮಾರ್ ಜೈನ್ ಸೇರಿದಂತೆ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!