July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು.

ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಬಂಧಿತ ನಕ್ಸಲ್ ಮಹೇಶ್@ಜಯಣ್ಣ@ಜಾನ್ ಅವರನ್ನು ಕೇರಳ ರಾಜ್ಯದ ಪೊಲೀಸರು ಬಿಗಿ ಭದ್ರತೆಯೊಂದಿಗೆ ಫೆ. 19 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.


ಮೊಸ್ಟ್ ವಾಟೆಂಡ್ ನಕ್ಸಲ್ ಆಗಿದ್ದ ಮಹೇಶ್ ಮೂಲಃತ ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕ‌ರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ ಆಲಿಯಾಸ್ ಜಾನ್ ಆಲಿಯಾಸ್ ಮಾರಪ್ಪ ಎಂಬ ಹೆಸರುಗಳಿವೆ.

ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ ಕುತ್ಲೂರು ಲಿಂಗಪ್ಪ ಮಲೆಕುಡಿಯ ಮನೆಯ ಅಂಗಳದಲ್ಲಿ ನಕ್ಸಲ್ ಕರಪತ್ರ ಹಚ್ಚಿದ್ದ ಪ್ರಕರಣವನ್ನು ಮರು ತನಿಖೆಗೆ ಆದೇಶ ಹೊರಡಿಸಿದ ಕಾರಣ ಅವರನ್ನು ಬೆಳ್ತಂಗಡಿ ನ್ಯಾಯಲಕ್ಕೆ ಹಾಜರು ಪಡಿಸಲಾಗಿದೆ. ಕಳೆದ ಆರು ತಿಂಗಳಿಂದ ಕೇರಳದ ಜೈಲಿನಲ್ಲಿದ್ದಾರೆಕರ್ನಾಟಕದ ನಕ್ಸಲ್ ಮುಖಂಡರುಗಳೊಂದಿಗೆ ಮಹೇಶ್ ಅವರೂ ರಾಜ್ಯದ ಸಿಎಂ ಮುಂದೆ ಶರಣಾತಿಯಾಗಿದ್ದರು.

Related posts

ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆ ನಿರ್ಮಾಣ ಆಗಲಿ :ಮೋಹನ್ ಗೌಡ ಕಲ್ಮoಜ

Suddi Udaya

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಕಲ್ಮಂಜ: ಕೃಷಿಕ ಶೀನ ಶೆಟ್ಟಿ ನಿಧನ

Suddi Udaya

ಉಜಿರೆ ಶ್ರೀ ಧ ಮಂ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಕಾಳಿದಾಸ ಜಯಂತಿ ಆಚರಣೆ

Suddi Udaya
error: Content is protected !!