22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆಯು ಫೆ. 18 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು ವಹಿಸಿದರು. ಭಾರತೀಯ ಯುವ ಜೆಸಿ ವಿಭಾಗದ ಪದಗ್ರಹಣವನ್ನು ನಡೆಸಲು ನಿರ್ಧರಿಸಲಾಯಿತು. ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಿಕಟಪೂರ್ವ ಅಧ್ಯಕ್ಷೆ ಡಾ. ಶೋಭಾ ಪಿ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಕೋಶಾಧಿಕಾರಿಗಳಾದ ಪ್ರಜ್ವಲ್ ಲೋಬೊ ಅವರು ವಾರ್ಷಿಕ ಸದಸ್ಯತ್ವ ಶುಲ್ಕದ ಮಾಹಿತಿ ನೀಡಿದರು. ಪೂರ್ವಾಧ್ಯಕ್ಷರಾದ ಸಂತೋಷ್ ಜೈನ್ ಅವರನ್ನು ಯುವ ಜೆಸಿ ವಿಭಾಗದ ನಿರ್ದೇಶಕರನ್ನಾಗಿ ಆರಿಸಲಾಯಿತು. ಇತ್ತೀಚೆಗೆ ನಿಧನರಾದ ಖ್ಯಾತ ವೈದ್ಯ ಡಾ. ಟಿ. ವಿ. ಜೋಸೆಫ್ ಅವರ ಗೌರವಾರ್ಥ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು.

ಮಾರ್ಚ್ ತಿಂಗಳಲ್ಲಿ ವಲಯ ಉಪಾಧ್ಯಕ್ಷರ ಅಧಿಕೃತ ಭೇಟಿಗೆ ತಯಾರಿ ನಡೆಸಲಾಯಿತು. ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ಆಯುಷ್ ಜೈನ್ ಅವರು ವಾಚಿಸಿದರು. ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ಜಸ್ವಂತ್ ಪಿರೇರಾ, ರೇಷ್ಮಾ ಡಿ ಅಲ್ಮೇಡಾ, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ, ದಕ್ಷಾ ಜೈನ್, ವಿಕ್ಟರ್ ಸುವಾರಿಸ್, ದೀಪಾ ವಿ., ಲೇಡಿ ಜೆಸಿ ಅಧ್ಯಕ್ಷರಾದ ರೇಶ್ಮಿ ಡಿಸೋಜ, ಯುವ ಜೆಸಿ ಅಧ್ಯಕ್ಷರಾದ ಆದ್ಯಾ ಜೈನ್, ಧನುಷ್ ಕುಮಾರ್ ಜೈನ್, ಅಕ್ಷತ್ ರೈ, ನಿತ್ಯಾನಂದ ರೈ, ವಿದ್ಯೇಂದ್ರ ಅವರು ಚರ್ಚೆಯಲ್ಲಿ ಭಾಗವಹಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ಅವರು ವಂದಿಸಿದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya
error: Content is protected !!