23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆಯು ಫೆ. 18 ರಂದು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ಅವರು ವಹಿಸಿದರು. ಭಾರತೀಯ ಯುವ ಜೆಸಿ ವಿಭಾಗದ ಪದಗ್ರಹಣವನ್ನು ನಡೆಸಲು ನಿರ್ಧರಿಸಲಾಯಿತು. ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ನಿಕಟಪೂರ್ವ ಅಧ್ಯಕ್ಷೆ ಡಾ. ಶೋಭಾ ಪಿ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಕೋಶಾಧಿಕಾರಿಗಳಾದ ಪ್ರಜ್ವಲ್ ಲೋಬೊ ಅವರು ವಾರ್ಷಿಕ ಸದಸ್ಯತ್ವ ಶುಲ್ಕದ ಮಾಹಿತಿ ನೀಡಿದರು. ಪೂರ್ವಾಧ್ಯಕ್ಷರಾದ ಸಂತೋಷ್ ಜೈನ್ ಅವರನ್ನು ಯುವ ಜೆಸಿ ವಿಭಾಗದ ನಿರ್ದೇಶಕರನ್ನಾಗಿ ಆರಿಸಲಾಯಿತು. ಇತ್ತೀಚೆಗೆ ನಿಧನರಾದ ಖ್ಯಾತ ವೈದ್ಯ ಡಾ. ಟಿ. ವಿ. ಜೋಸೆಫ್ ಅವರ ಗೌರವಾರ್ಥ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು.

ಮಾರ್ಚ್ ತಿಂಗಳಲ್ಲಿ ವಲಯ ಉಪಾಧ್ಯಕ್ಷರ ಅಧಿಕೃತ ಭೇಟಿಗೆ ತಯಾರಿ ನಡೆಸಲಾಯಿತು. ಜೆಸಿ ವಾಣಿ ಹಾಗೂ ಧ್ಯೇಯ ವಾಕ್ಯವನ್ನು ಆಯುಷ್ ಜೈನ್ ಅವರು ವಾಚಿಸಿದರು. ವಲಯ ಉಪಾಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ಜಸ್ವಂತ್ ಪಿರೇರಾ, ರೇಷ್ಮಾ ಡಿ ಅಲ್ಮೇಡಾ, ಜೋಸೆಫ್ ಪಿರೇರಾ, ಜೆಸಿಂತಾ ಡಿಸೋಜ, ದಕ್ಷಾ ಜೈನ್, ವಿಕ್ಟರ್ ಸುವಾರಿಸ್, ದೀಪಾ ವಿ., ಲೇಡಿ ಜೆಸಿ ಅಧ್ಯಕ್ಷರಾದ ರೇಶ್ಮಿ ಡಿಸೋಜ, ಯುವ ಜೆಸಿ ಅಧ್ಯಕ್ಷರಾದ ಆದ್ಯಾ ಜೈನ್, ಧನುಷ್ ಕುಮಾರ್ ಜೈನ್, ಅಕ್ಷತ್ ರೈ, ನಿತ್ಯಾನಂದ ರೈ, ವಿದ್ಯೇಂದ್ರ ಅವರು ಚರ್ಚೆಯಲ್ಲಿ ಭಾಗವಹಿಸಿದರು. ಕಾರ್ಯದರ್ಶಿಗಳಾದ ಜೋಯಲ್ ಪಿರೇರಾ ಅವರು ವಂದಿಸಿದರು.

Related posts

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!