September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

ನಾರಾವಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.೯ ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣಾ ಕಾರ್ಯಕ್ರಮವು ಫೆ.೧೫ ರಂದು ನಡೆಯಿತು.


ಶ್ರೀ ಸೂರ್ಯನಾರಾಯಣ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರು ನಿರಂಜನ್ ಅಜ್ರಿ ಉದ್ಘಾಟನೆಯನ್ನು ನೆರವೇರಿಸಿದರು. ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು ಅಧ್ಯಕ್ಷತೆಯನ್ನು ವಹಿಸಿದರು. ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಕೃಷ್ಣ ವಿ. ತಂತ್ರಿ ದೀಪ ಪ್ರಜ್ವಲನೆ ನೆರವೇರಿಸಿದರು.


ಮುಖ್ಯ ಅತಿಥಿಗಳಾಗಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ಶ್ರೀ ಸೂರ್ಯನಾರಾಯಣ ದೇವಸ್ಥಾನ ಮಾಜಿ ಆಡಳಿತ ಮೊಕ್ತೇಸರ ವಸಂತ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಹೆಗ್ಡೆ, ಕಾರ್ಯಾಧ್ಯಕ್ಷರಾದ ಜಗದೀಶ್ ಅಂಚನ್, ಮಹಾವೀರ ಜೈನ್, ಡಾ| ಪ್ರಸಾದ್ ಬಿ. ಶೆಟ್ಟಿ ವಿಜಯ ಕ್ಲಿನಿಕ್ ಹೊಸ್ಮಾರು, ಪ್ರದೀಪ್ ಪಾಟಕ್, ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ನಿತ್ಯಾನಂದ ಪೂಜಾರಿ, ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗುರುಸ್ವಾಮಿ ವಿಶ್ವನಾಥ ಪೂಜಾರಿ, ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಉಪಾಧ್ಯಕ್ಷ ರಾಮಚಂದ್ರ ನಾರಾವಿ, ಪ್ರಧಾನ ಕಾರ್ಯದರ್ಶಿ ಸಂದೀಪ್ ಹಾಗೂ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.


ವಸಂತ ಗುಣನಿಲ ಸ್ವಾಗತಿಸಿದರು. ಜಯ ಪೂಜಾರಿ ಪ್ರಸ್ತಾವಿಸಿದರು. ಸತೀಶ್ ಹೊಸ್ಮಾರು ನಿರೂಪಿಸಿದರು. ಸಮಿತಿ ಪದಾಧಿಕಾರಿಗಳು ಸಹಕರಿಸಿದರು.

Related posts

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya
error: Content is protected !!