July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಫೆ.18 ರಂದು ಸಂಜೆ ನಡೆದಿದೆ.

ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಎಂಬಾತನೇ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಬಾಲಕ.
ಅಂಗಳದಲ್ಲಿ ಮಕ್ಖಳಿಬ್ಬರು ಆಟವಾಡುತ್ತಿದ್ದ ವೇಳೆ ಪತ್ತೆಯಾದ ಚೆಂಡಿನಂಥ ವಸ್ತುವೊಂದನ್ನು ಹೆಕ್ಕಿಕೊಂಡು ಬಂದ ಬಾಲಕರಿಬ್ಬರು ಕ್ರಿಕೆಟ್‌ ಆಟವಾಡಿದ್ದಾರೆ. ಏನೂ ಅರಿಯದ ಮುಗ್ಧ ಮಕ್ಕಳು ಇಬ್ಬರು ಬೌಲಿಂಗ್ ಮಾಡಿದ್ದು ಇನ್ನೊಬ್ಬ ಬ್ಯಾಟಿಂಗ್ ಮಾಡಿದ ಸಂದರ್ಭ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬಾಲಕ ಅಭೀಶ್ ಎಂಬಾತ ಗಾಯಗೊಂಡಿದ್ದಾನೆ.
ಗಾಯಗೊಂಡ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya
error: Content is protected !!