25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಫೆ.18 ರಂದು ಸಂಜೆ ನಡೆದಿದೆ.

ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಎಂಬಾತನೇ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಬಾಲಕ.
ಅಂಗಳದಲ್ಲಿ ಮಕ್ಖಳಿಬ್ಬರು ಆಟವಾಡುತ್ತಿದ್ದ ವೇಳೆ ಪತ್ತೆಯಾದ ಚೆಂಡಿನಂಥ ವಸ್ತುವೊಂದನ್ನು ಹೆಕ್ಕಿಕೊಂಡು ಬಂದ ಬಾಲಕರಿಬ್ಬರು ಕ್ರಿಕೆಟ್‌ ಆಟವಾಡಿದ್ದಾರೆ. ಏನೂ ಅರಿಯದ ಮುಗ್ಧ ಮಕ್ಕಳು ಇಬ್ಬರು ಬೌಲಿಂಗ್ ಮಾಡಿದ್ದು ಇನ್ನೊಬ್ಬ ಬ್ಯಾಟಿಂಗ್ ಮಾಡಿದ ಸಂದರ್ಭ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬಾಲಕ ಅಭೀಶ್ ಎಂಬಾತ ಗಾಯಗೊಂಡಿದ್ದಾನೆ.
ಗಾಯಗೊಂಡ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!