25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

ಕಾಶಿಪಟ್ಣ: ಕಾಶಿಪಟ್ಣ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಕುಜಂಬೆ ರಸ್ತೆಯವರೆಗೆ ಡಾಂಬರೀಕರಣಗೊಳಿಸಲು ಶಾಸಕ ಹರೀಶ್ ಪೂಂಜರವರು ಅನುದಾನ ಒದಗಿಸಿದ್ದಾರೆ. ಈ ರಸ್ತೆಯ ಅಭಿವೃದ್ಧಿಯು ಸ್ಥಳೀಯರ ಮತ್ತು ಭಕ್ತಾದಿಗಳ ಬಹುಕಾಲದ ಬೇಡಿಕೆಯಾಗಿತ್ತು.

ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ರಸ್ತೆ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಲಾಯಿತು. ಈ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜ ಅವರು ಅನುದಾನ ಬಿಡುಗಡೆ ಮಾಡಿರುವುದಕ್ಕೆ ಸ್ಥಳೀಯರು ಮತ್ತು ಬಿಜೆಪಿ ಶಕ್ತಿಕೇಂದ್ರ ಕಾಶಿಪಟ್ಣದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಶಿಲಾನ್ಯಾಸ ನೆರವೇರಿಸಿದ ಮರೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತ್ನಾಕರ್ ಬನ್ನನ್ ಹಾಗೂ ಕಾಮಗಾರಿಗೆ ಸಹಕರಿಸಿದ ಕಾಶಿಪಟ್ಣ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಅಶೋಕ್ ಕುಮಾರ್ ಜೈನ್, ರವೀಂದ್ರ ಪಿ., ಸವಿತಾ ನಡ್ಡ ಇವರೆಲ್ಲರಿಗೂ ಗ್ರಾಮಸ್ಥರು ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ. ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಸುಧಾರಣೆಯತ್ತ ಶಾಸಕರು ತೋರುತ್ತಿರುವ ಈ ಆಸಕ್ತಿಯು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya
error: Content is protected !!