July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು.

ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಬಂಧಿತ ನಕ್ಸಲ್ ಮಹೇಶ್@ಜಯಣ್ಣ@ಜಾನ್ ಅವರನ್ನು ಕೇರಳ ರಾಜ್ಯದ ಪೊಲೀಸರು ಬಿಗಿ ಭದ್ರತೆಯೊಂದಿಗೆ ಫೆ. 19 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.


ಮೊಸ್ಟ್ ವಾಟೆಂಡ್ ನಕ್ಸಲ್ ಆಗಿದ್ದ ಮಹೇಶ್ ಮೂಲಃತ ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕ‌ರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ ಆಲಿಯಾಸ್ ಜಾನ್ ಆಲಿಯಾಸ್ ಮಾರಪ್ಪ ಎಂಬ ಹೆಸರುಗಳಿವೆ.

ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ ಕುತ್ಲೂರು ಲಿಂಗಪ್ಪ ಮಲೆಕುಡಿಯ ಮನೆಯ ಅಂಗಳದಲ್ಲಿ ನಕ್ಸಲ್ ಕರಪತ್ರ ಹಚ್ಚಿದ್ದ ಪ್ರಕರಣವನ್ನು ಮರು ತನಿಖೆಗೆ ಆದೇಶ ಹೊರಡಿಸಿದ ಕಾರಣ ಅವರನ್ನು ಬೆಳ್ತಂಗಡಿ ನ್ಯಾಯಲಕ್ಕೆ ಹಾಜರು ಪಡಿಸಲಾಗಿದೆ. ಕಳೆದ ಆರು ತಿಂಗಳಿಂದ ಕೇರಳದ ಜೈಲಿನಲ್ಲಿದ್ದಾರೆಕರ್ನಾಟಕದ ನಕ್ಸಲ್ ಮುಖಂಡರುಗಳೊಂದಿಗೆ ಮಹೇಶ್ ಅವರೂ ರಾಜ್ಯದ ಸಿಎಂ ಮುಂದೆ ಶರಣಾತಿಯಾಗಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಲಿದೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಹೇಳಿಕೆ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya
error: Content is protected !!