July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರಿನಲ್ಲಿ ಸಿಡಿಮದ್ದು ಸ್ಫೋಟಗೊಂಡು ಆಟವಾಡುತ್ತಿದ್ದ ಬಾಲಕನಿಗೆ ಗಾಯ

ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಫೆ.18 ರಂದು ಸಂಜೆ ನಡೆದಿದೆ.

ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಎಂಬಾತನೇ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಬಾಲಕ.
ಅಂಗಳದಲ್ಲಿ ಮಕ್ಖಳಿಬ್ಬರು ಆಟವಾಡುತ್ತಿದ್ದ ವೇಳೆ ಪತ್ತೆಯಾದ ಚೆಂಡಿನಂಥ ವಸ್ತುವೊಂದನ್ನು ಹೆಕ್ಕಿಕೊಂಡು ಬಂದ ಬಾಲಕರಿಬ್ಬರು ಕ್ರಿಕೆಟ್‌ ಆಟವಾಡಿದ್ದಾರೆ. ಏನೂ ಅರಿಯದ ಮುಗ್ಧ ಮಕ್ಕಳು ಇಬ್ಬರು ಬೌಲಿಂಗ್ ಮಾಡಿದ್ದು ಇನ್ನೊಬ್ಬ ಬ್ಯಾಟಿಂಗ್ ಮಾಡಿದ ಸಂದರ್ಭ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬಾಲಕ ಅಭೀಶ್ ಎಂಬಾತ ಗಾಯಗೊಂಡಿದ್ದಾನೆ.
ಗಾಯಗೊಂಡ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya
error: Content is protected !!