September 6, 2026
ನಿಧನಬೆಳ್ತಂಗಡಿವರದಿ

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

ಬೆಳ್ತಂಗಡಿ: ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಬಿಜೆಪಿಯ ಕಾರ್ಯಕರ್ತ ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ಅವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಭಾರತೀಯ ಜನಸಂಘದ ಹಿರಿಯ ಕಾರ್ಯಕರ್ತ ತೆಂಕಕಜೆಕಾರು, ಬಡಗಕಜೆಕಾರು ಹಾಗೂ ಸರಪಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬಿಜೆಪಿಯ ಆಧಾರಸ್ತಂಭವಾಗಿ ಜನಸಾಮಾನ್ಯರ ನೋವು ನಲಿವುಗಳಿಗೆ ಸದಾ ಸ್ಪಂದಿಸಿ, ಜನಪರವಾದ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡು ಜನನಾಯಕರೆನಿಸಿಕೊಂಡಿದ್ದರು.

ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಜನಪ್ರತಿನಿಧಿಯಾಗಿ, ಸಹಕಾರಿ ಕ್ಷೇತ್ರದಲ್ಲಿಯೂ ಸೈ ಎನಿಸಿಕೊಂಡಿದ್ದ ಹರಿಶ್ಚಂದ್ರ ಪೂಜಾರಿ ಕಜೆಕಾರುರವರು ದೀರ್ಘಕಾಲದ ಅಸೌಖ್ಯದಿಂದ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ, ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು ಅವರು ಸಂತಾಪ ಸೂಚಿಸಿದ್ದಾರೆ.

ಜೊತೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕ ಎ.ರುಕ್ಷ್ಮಯ ಪೂಜಾರಿ, ಪದ್ಮನಾಭಕೊಟ್ಟಾರಿ,ಬಿ.ನಾಗರಾಜ ಶೆಟ್ಟಿ, ಪ್ರಮುಖರಾದ ತುಂಗಪ್ಪ ಬಂಗೇರ, ಹರಿಕೃಷ್ಣ ಬಂಟ್ವಾಳ, ದೇವದಾಸ್ ಶೆಟ್ಟಿ, ರಾಮದಾಸ್ ಬಂಟ್ವಾಳ, ಚೆನ್ನಪ್ಪ ಆರ್.ಕೋಟ್ಯಾನ್, ಸುಲೋಚನ ಜಿ.ಕೆ.ಭಟ್, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Related posts

ಶಿಶಿಲ: ಕಪಿಲಾ ನದಿ ಮಧ್ಯೆ ಸಿಲುಕಿದ ವ್ಯಕ್ತಿಯ ರಕ್ಷಣೆ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ಆ. 7 -8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಭಾಗವಹಿಸುವ ಅಭ್ಯರ್ಥಿಗಳಿಗೆ “ಶ್ರಮಿಕ ಶಾಸಕರ ಕಚೇರಿ” ಯಿಂದ ಬಸ್ ವ್ಯವಸ್ಥೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya
error: Content is protected !!