September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಪುರುಷರಗುಡ್ಡೆ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಫೆ.19 ರಂದು ಸಂಜೆ 3:30 ಸುಮಾರಿಗೆ ಧರ್ಮಸ್ಥಳ ಪೊಲೀಸರು ದಾಳಿ ವೇಳೆ ಆರು ಕೋಳಿ, ಮೂರು ಸಾವಿರ ಹಣ ಹಾಗೂ ಏಳು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ರಮ ಕೋಳಿ ಅಂಕದಲ್ಲಿದ್ದ ನಾವೂರು ನಿವಾಸಿ ಹರಿಶ್ಚಂದ್ರ ,ತೋಟತ್ತಾಡಿ ನಿವಾಸಿ ರಮೇಶ್, ಚಾರ್ಮಾಡಿ ನಿವಾಸಿ ಸುಧಾಕರ, ಚಾರ್ಮಾಡಿ ನಿವಾಸಿ ಅಶೋಕ್, ಬೆಳ್ತಂಗಡಿಯ ಪುಷ್ಪರಾಜ್, ನಾವೂರು ನಿವಾಸಿ ಶ್ರೀಧರ್, ಚಿಬಿದ್ರೆ ನಿವಾಸಿ ಚೆನ್ನಪ್ಪ ಬಂಧಿತ ಆರೋಪಿಗಳು.

ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿ ಎ.ಎಸ್.ಐ ಬಾಲಕೃಷ್ಣ,ಮಲ್ತೇಶ್, ಚರಣ್ ರಾಜ್ ,ಶೇಷಣ್ಣ,ಮಧು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲ (ರಿ.) ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya
error: Content is protected !!