July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಪುರುಷರಗುಡ್ಡೆ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಫೆ.19 ರಂದು ಸಂಜೆ 3:30 ಸುಮಾರಿಗೆ ಧರ್ಮಸ್ಥಳ ಪೊಲೀಸರು ದಾಳಿ ವೇಳೆ ಆರು ಕೋಳಿ, ಮೂರು ಸಾವಿರ ಹಣ ಹಾಗೂ ಏಳು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ರಮ ಕೋಳಿ ಅಂಕದಲ್ಲಿದ್ದ ನಾವೂರು ನಿವಾಸಿ ಹರಿಶ್ಚಂದ್ರ ,ತೋಟತ್ತಾಡಿ ನಿವಾಸಿ ರಮೇಶ್, ಚಾರ್ಮಾಡಿ ನಿವಾಸಿ ಸುಧಾಕರ, ಚಾರ್ಮಾಡಿ ನಿವಾಸಿ ಅಶೋಕ್, ಬೆಳ್ತಂಗಡಿಯ ಪುಷ್ಪರಾಜ್, ನಾವೂರು ನಿವಾಸಿ ಶ್ರೀಧರ್, ಚಿಬಿದ್ರೆ ನಿವಾಸಿ ಚೆನ್ನಪ್ಪ ಬಂಧಿತ ಆರೋಪಿಗಳು.

ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿ ಎ.ಎಸ್.ಐ ಬಾಲಕೃಷ್ಣ,ಮಲ್ತೇಶ್, ಚರಣ್ ರಾಜ್ ,ಶೇಷಣ್ಣ,ಮಧು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya
error: Content is protected !!