July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

ದುಬೈ: ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟವು ಫೆ. 15 ರಂದು ದುಬೈನಲ್ಲಿ ಅತ್ಯಂತ ವೈಭವದಿಂದ ಜರುಗಿತು. ಈ ಬಾರಿಯ ಕ್ರೀಡಾಕೂಟದ ಆಕರ್ಷಕ ವಿಜೇತ ಟ್ರೋಫಿಗಳನ್ನು ಸಂಘದ ಉಪಾಧ್ಯಕ್ಷ ಸುರೇಶ್ ಕುಂಪಲ ಅವರು ತಮ್ಮ ಮಾತೃಶ್ರೀ ದಿ| ಶ್ರೀಮತಿ ಕಮಲ ಅವರ ಸ್ಮರಣಾರ್ಥವಾಗಿ ಪ್ರಾಯೋಜಿಸಿದ್ದರು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಮೋಹನ್ ಕಡಂಬಳ, ಉಪಾಧ್ಯಕ್ಷ ಸುರೇಶ್ ಕುಂಪಲ ಹಾಗೂ ಸಲಹೆಗಾರರಾದ ಹರೀಶ್ ಕೋಡಿ ಮತ್ತು ಸುನಿಲ್ ಮೊಟ್ಟೆಮನೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಮೀನಾ ಹರೀಶ್ ಕೋಡಿ, ಸುಪ್ರೀತಾ ಸುರೇಶ್, ರಕ್ಷಿತಾ ದೇರಾಜೆ ಹಾಗೂ ಮಾನಸ ದಿಲೀಪ್ ಉಳುವಾರು ಪ್ರಾರ್ಥನೆ ಸಲ್ಲಿಸಿದರೆ, ಯತೀಶ್ ಗೌಡ ಸ್ವಾಗತಿಸಿದರು. ಗಣೇಶ್ ಅಚ್ಚಂಡಿರ, ಆನಂದ್ ಪಟ್ಟೆ ವಳಾಲ್, ದಿಲೀಪ್ ಉಳುವಾರು ಮತ್ತು ಸುನಿಲ್ ಕರ್ಣಾಯನ ಅವರು ಪಂದ್ಯಾವಳಿಯ ಉದ್ಘಾಟನಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.


ಜಿದ್ದಾಜಿದ್ದಿನಿಂದ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಿದ್ದು, ‘ಗೌಜಿ ಗಮ್ಮತ್’ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತು ಹಾಗೂ ‘ಕೂರ್ಗ್ ವಾರಿಯರ್ಸ್’ ತಂಡವು ರನ್ನರ್-ಅಪ್ ಪ್ರಶಸ್ತಿ ಪಡೆಯಿತು. ಇದೇ ಮೊದಲ ಬಾರಿಗೆ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ ತ್ರೋಬಾಲ್ ಸೀಸನ್-1 ಪಂದ್ಯಾವಳಿಯಲ್ಲಿ 4 ತಂಡಗಳು ಪಾಲ್ಗೊಂಡಿದ್ದು, ‘ದುಬೈ ರಾಯಲ್ಸ್’ ಪ್ರಥಮ ಸ್ಥಾನ ಹಾಗೂ ‘ಟೀಂ ಬಾವಾಸ್’ ದ್ವಿತೀಯ ಸ್ಥಾನ ಗಳಿಸಿತು. ಉತ್ತಮ ಶಿಸ್ತಿನ ತಂಡ ಪ್ರಶಸ್ತಿಯ ಪ್ರಾಯೋಜಕರಾದ ಆನಂದ್ ವಳಾಲ್ ರವರು ಗೌಡ ಫ್ರೆಂಡ್ಸ್ ಕ್ಲಬ್ ಗೆ ಪ್ರಶಸ್ತಿಯನ್ನು ನೀಡಿದರು. ಕ್ರೀಡಾಕೂಟದ ಅಂಗವಾಗಿ ನಡೆದ ಮಹಿಳೆಯರ ಹಗ್ಗಜಗ್ಗಾಟ ಎಲ್ಲರ ಗಮನ ಸೆಳೆಯಿತು. ಮಕ್ಕಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಮನರಂಜನಾ ಆಟಗಳನ್ನು ಆಯುಶ್ ಕೋಡಿ ಮತ್ತು ಕಾವ್ಯ ಅವಿನಾಶ್ ರವರು ಅತ್ಯಂತ ಉತ್ಸಾಹದಿಂದ ನಿರ್ವಹಿಸಿದರು. ಕ್ರಿಕೆಟ್ ಪಂದ್ಯಾವಳಿಯ ತೀರ್ಪುಗಾರರಾಗಿ ಗಿರೀಶ್, ಸುಧೀರ್ ಮತ್ತು ಮನೋಜ್ ಅವರು ಅಚ್ಚುಕಟ್ಟಾಗಿ ನಿಭಾಯಿಸಿದರು. ಕಾರ್ಯಕ್ರಮದುದ್ದಕ್ಕೂ ಮನೋಜ್ ಕುಲಾಲ್ ಅವರು ತಮ್ಮ ಆಕರ್ಷಕ ವಾಗ್ಝರಿಯ ಮೂಲಕ ಕಾಮೆಂಟರಿ ನಿರ್ವಹಿಸಿದರು. ಕ್ರೀಡಾ ಸಂಯೋಜಕರಾಗಿ ಪ್ರಶಾಂತ್ ವಿಟ್ಲ, ನಾಗೇಶ್, ಅಕ್ಷತ್ ಮಲ್ಲಿ ಹಾಗೂ ಅನೀಶ್ ಶೆಟ್ಟಿ ಅವರು ಸಹಕರಿಸಿದರು. ಕ್ರೀಡಾಕೂಟಕ್ಕೆ ಹರ್ಷ ತುಂಬಲು ಮೋಹನಿಶ್ ಕೊಂಬಾರನ ಅವರು ಡಿಜೆ ಸಂಗೀತದ ಮೂಲಕ ಮೆರುಗು ನೀಡಿದರೆ.ಕಿರಣ್ ಬೆದ್ರೋಡಿ ಮತ್ತು ಲಕ್ಷ್ಮೀನಾರಾಯಣ ಕಣ್ವತೀರ್ಥ ಅವರು ಇಡೀ ಕಾರ್ಯಕ್ರಮದ ಸುಂದರ ಕ್ಷಣಗಳನ್ನು ಕ್ಯಾಮೆರಾದ ಮೂಲಕ ಸೆರೆಹಿಡಿದರು.

ಬೆಳಗಿನ ಮತ್ತು ಸಂಜೆಯ ಉಪಹಾರದ ವ್ಯವಸ್ಥೆಯನ್ನು ಸುಪ್ರೀತ್ ಕುಂಡಡ್ಕ, ಮೋಹನ್ ತೂಟೇರ, ನಿತಿನ್ ಧೋರ್ತೋಡಿ, ಸುನಿಲ್ ಮೊಟ್ಟೆಮನೆ, ವಿನೋದ್ ಬಳ್ಳಡ್ಕ, ಅಜಿತ್ ಮಡ್ಕೂರು ಒದಗಿಸಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಿರಣ್ ಗೌಡ ವಹಿಸಿದ್ದರು. ವಿಜೇತರಿಗೆ ಪದಾಧಿಕಾರಿಗಳು ಬಹುಮಾನ ವಿತರಿಸಿದರು. ತೇಜ್ ಕೊರಂಬಡ್ಕ ಅವರು ಸಂಘದ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ದಿಲೀಪ್ ಉಳುವಾರು ವಂದಿಸಿದರು. ನಿತಿನ್ ಧೋರ್ತೋಡಿ ಮತ್ತು ಶ್ರಾವ್ಯ ಗೌಡ ಕಾರ್ಯಕ್ರಮವನ್ನು ಉತ್ತಮವಾಗಿ ನಿರೂಪಿಸಿದರು. ಮುಖ್ಯ ಪ್ರಾಯೋಜಕರಾಗಿ ಸುರೇಶ್ ಕುಂಪಲ ಡುಮೆಕ್ ಇಂಜಿನಿಯರಿಂಗ್ ವರ್ಕ್ಸ್, ಮೋಹನ್ ಮೋಳ್ಟೆನ್ ಟೆಕ್ನಿಕಲ್ ಸರ್ವೀಸೆಸ್, ಶೆಟ್ಟಿ ಲಂಚ್ ಹೋಂ, ಪ್ರಸೀಧ್ ಗೌಡ ಹ್ಯಾವೆನ್ ಸ್ಟೋನ್, ಯತೀಶ್ ಗೌಡ ಫಸ್ಟ್ ಮೊಲಿಕ್ಯೂಲ್ ಕಾರ್ಬನ್ಸ್, ಪುಲೋಮ ಗೌಡ ಬೆಟರ್ ವೇ ಕನ್ಸಲ್ಟಿಂಗ್ ಸರ್ವೀಸಸ್ ಮತ್ತು ಚಂದ್ರ ಬೆದ್ರೋಡಿಯವರು ಸಹಕರಿಸಿದ್ದರು. ರೋಶನ್ ಕಂಪ ಮತ್ತು ಶರತ್ ಚೊಕ್ಕಾಡಿ ಅವರ ನೇತೃತ್ವದಲ್ಲಿ ಇಡೀ ಕ್ರೀಡಾಕೂಟವು ಯಶಸ್ವಿಯಾಗಿ ನೆರವೇರಿತು.

Related posts

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya
error: Content is protected !!