22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ, ಮತ್ತು ಕೇಂದ್ರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಮಂಡಳಿ, ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ಫೆ. 19 ರಂದು ಎಸ್.ಡಿ.ಎಂ ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಆಸ್ಪತ್ರೆ, ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಮುಖ್ಯ ಉದ್ದೇಶ ಅತಿಸ್ಥೂಲ (Obesity) ಸಮಸ್ಯೆಯನ್ನು ಔಷಧ ರಹಿತ, ವೈಜ್ಞಾನಿಕ ಹಾಗೂ ಸಮಗ್ರ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆಯ ಮೂಲಕ ನಿಯಂತ್ರಿಸುವುದು. ಕಾರ್ಯಕ್ರಮದಲ್ಲಿ ಚಿಕಿತ್ಸಾ ಆಹಾರ ಪದ್ಧತಿ, ಯೋಗಾಭ್ಯಾಸ, ಜಲಚಿಕಿತ್ಸೆ, ಮಣ್ಣು ಚಿಕಿತ್ಸೆ, ಉಪವಾಸ ಚಿಕಿತ್ಸೆ ಹಾಗೂ ಜೀವನಶೈಲಿ ಪರಿವರ್ತನೆ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ.

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಸಾಧಕರನ್ನು ಉದ್ದೇಶಿಸಿ ಮಾತನಾಡಿ, ಅತಿಸ್ಥೂಲ ನಿಯಂತ್ರಣ ಚಿಕಿತ್ಸಾ ಶಿಬಿರಕ್ಕೆ ಮಾಹಿತಿಯನ್ನು ನೀಡಿದರು. ಸ್ಥಾನಿಕ ವೈದ್ಯಾಧಿಕಾರಿ ಡಾ. ಬಿಂದು ಶ್ರೀಧರ್ ಕಾರ್ಯಕ್ರಮದ ಚಿಕಿತ್ಸಾ ಕ್ರಮಗಳ ಕುರಿತು ಸಂಕ್ಷಿಪ್ತ ವಿವರಣೆ ನೀಡಿದರು.
ಕಾರ್ಯಕ್ರಮವನ್ನು ಆಹಾರ ಮತ್ತು ಪೋಷಣಾ ವಿಭಾಗದ ಪ್ರಾಧ್ಯಾಪಕಿ ಹಾಗೂ ಡೀನ್ ಡಾ. ಗೀತಾ ಬಿ. ಶೆಟ್ಟಿ ಸಂಯೋಜಿಸಿದ್ದು. ಕಾರ್ಯಕ್ರಮದ ನಿರೂಪಣೆಯನ್ನು ಪ್ರಥಮ ವರ್ಷದ ಎಂ.ಡಿ (ಡಯಟ್ ಅಂಡ್ ನ್ಯೂಟ್ರಿಷನ್) ವಿದ್ಯಾರ್ಥಿನಿ ಡಾ. ಭಾಷಿಣಿ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಪ್ರಾಯೋಗಿಕ ತರಗತಿಗಳು, ತಜ್ಞರ ಉಪನ್ಯಾಸಗಳು, ನೈಸರ್ಗಿಕ ಚಿಕಿತ್ಸೆಗಳು ಹಾಗೂ ವೈಯಕ್ತಿಕ ಆಹಾರ ಸಲಹೆಗಳು ನಡೆಯಲಿವೆ.

Related posts

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya
error: Content is protected !!