23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

ಉರುವಾಲು: ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ದಾರಗೊಂಡಿರುವ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಕಾರಿಂಜದಲ್ಲಿರುವ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಸಾನಿಧ್ಯದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕೃಪಾಶಿರ್ವಾದಗಳೊಂದಿಗೆ ಫೆ.20ರಿಂದ 22ರ ವರೆಗೆ ನಡೆಯಲಿರುವ ದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಶುಕ್ರವಾರ(ಫೆ.೨೦) ಚಾಲನೆ ನೀಡಲಾಯಿತು.

ವೇಣೂರು ಕುಂಞಡಿ ವೇದಮೂರ್ತಿ ಶ್ರೀ ಕೆ.ಲಕ್ಷ್ಮೀ ನಾರಾಯಣ ಕಾರಂತರ ಅವರ ನೇತೃತ್ವದಲ್ಲಿ ದೇವರ ಪ್ರಾಥನೆ ನಡೆಸುವುದರೊಂದಿಗೆ ವಿವಿಧ ವೈದಿಕ, ಧಾರ್ಮಿಕ, ಸಂಸ್ಕೃತಿ ಕಾರ್ಯಕ್ರಮಗಳು ನೆರವೇರಿತು.
ಬೆಳಗ್ಗೆ ತಂತ್ರಿಗಳ ಆಗಮನ, ಪೂರ್ಣ ಕುಂಭ ಸ್ವಾಗತ, ಸ್ವಸ್ತಿ ವಾಚನ, ಸಾಮೂಹಿಕ ಪ್ರಾರ್ಥನೆ ತೋರಣ ಮುಹೂರ್ತ ಉಗ್ರಾಣ ಮುಹೂರ್ತ, ಭಜನೆ, ಪಂಚಗವ್ಯ, ಖನನಾದಿ, ಸಪ್ತಶುದ್ಧಿ, ಸ್ವಸ್ತಿಪುಣ್ಯಾಹವಾಚನ, ಗಣಪತಿ ಹವನ, ಶಿಲ್ಪಿಗಳಿಂದ ಆಲಯ ಪರಿಗ್ರಹ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಹೊರೆಕಾಣಿಕೆ ಮೆರವಣಿಗೆ:
ದೇವಸ್ಥಾನದ ಮುಖ್ಯದ್ವಾರದ ಬಳಿ ಭವ್ಯ ಹೊರೆಕಾಣಿಕೆ ಮೆರೆವಣಿಗೆಗೆ ಸಂಜೆ ಉಪ್ಪಿನಂಗಡಿ ಮಾಣಿಮಾರ್ ಸಚಿನ್ ಬೇಕ್ ಆ್ಯಂಡ್ ಐಸ್‌ಕ್ರೀಮ್ ಸಿಇಒ ಸಚಿನ್ ಎ.ಎಸ್. ಚಾಲನೆ ನೀಡಿದರು. ಬಳಿಕ ವಿವಿಧೆಡೆಯಿಂದ ಆಗಮಿಸಿದ ಹಸಿರು ಹೊರೆಕಾಣಿಕೆ ಇಳಂತಿಲದ ವಾಣಿಶ್ರೀ ಭಜನಾ ಮಂದಿರದ ಬಳಿ ಸಂಗಮಗೊಂಡು ಭವ್ಯ ಮೆರವಣಿಗೆ ಮೂಲಕ ಬ್ಯಾಂಡ್, ವಾದ್ಯಗಳ ವಾದನದೊಂದಿಗೆ ಹಲವಾರು ವಾಹನಗಳಲ್ಲಿ ಹಸಿರು ಹೊರೆಕಾಣಿಕೆ ಮೆರವಣಿಗೆ ಕ್ಷೇತ್ರಕ್ಕೆ ಸಾಗಿತು.

ಅಪರಾಹ್ನ ೩ರಿಂದ ಪಶುದಾನ ಪುಣ್ಯಾಹ, ಪ್ರಾಸಾದ ಶುದ್ಧಿ, ರಾಕ್ಷೋಘ್ನಹೋಮ, ವಾಸ್ತುಹೋಮ, ವಾಸ್ತು ಕಲಶಪೂಜೆ, ರಕ್ಷಾ ಕಲಶಪೂಜೆ, ವಾಸ್ತುಬಲಿ, ದಿಕ್ಷಾಲ ಬಲಿ, ವಾಸ್ತುಕಲಶಾಭಿಷೇಕ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಕಾರ್ಯಾಲಯವನ್ನು ಜರ್ನಾಧನ ಪೂಜಾರಿಕಡ್ತಿಲ ಹಾಗೂ ಉಗ್ರಾಣವನ್ನು ಕಣಿಯೂರು ರೈತಬಂಧು ಆಹಾರೋಧ್ಯಮ ಮಾಲಕ ಶಿವಶಂಕರ್ ನಾಯಕ್, ಕರಾಯ ಶ್ರೀಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ಶೆಟ್ಟಿ ಮ್ಮೆರ ಭಜನಾ ಕಾರ್ಯಕ್ರಮ ಉದ್ಘಾಟಿಸಿದರು.

ಕ್ಷೇತ್ರದ ಮುಖ್ಯ ಮಹಾದ್ವಾರವನ್ನು ಉಪ್ಪಿನಂಗಡಿ ಶ್ರೀ ಮಾತ ಸಚಿನ್ ಉದ್ಘಾಟಿಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷ ಸುನೀಲ್ ಅಣವು, ಕಾರ್ಯದರ್ಶಿ ಸುಂದರ ಶೆಟ್ಟಿ ಎಂಜಿರಪಲ್ಕೆ, ಕೋಶಾಧಿಕಾರಿ ಗೋಪಾಲಕೃಷ್ಣ ಗೌಡ ಅಲೈಮಾರು, ಉರುವಾಲು ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಕೊರಗಪ್ಪ ಪೂಜಾರಿ ಕಾರಿಂಜ, ಕಾರ್ಯದರ್ಶಿ ಧರ್ಣಪ್ಪ ನಾಯ್ಕ ಆನಡ್ಕ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕಿರಣ್‌ಚಂದ್ರ ಡಿ. ಪುಷ್ಪಗಿರಿ, ಅಧ್ಯಕ್ಷ ದಾಸಪ್ಪ ಗೌಡ ನಾಗಶ್ರೀ, ಕೋಡ್ಯಡ್ಕ, ಕಾರ್ಯಾಧ್ಯಕ್ಷ ವಿಜಯ ಕುಮಾರ್ ಕಲ್ಲಳಿಕೆ, ಸತೀಶ್ ಸಾಲ್ಯಾನ್ ಪಿಲಿಕಲ್ಲು, ಕೋಶಾಧಿಕಾರಿ ದುಗ್ಗಪ್ಪ ಗೌಡ ಮಣೆಗಾರಮಜಲು, ಹೊರೆಕಾಣಿಕೆ ಸಮಿತಿ ಸಂಚಾಲಕ ಪ್ರಭಾಕರ ಗೌಡ, ಪ್ರಮುಖರಾದ ರವಿ ಇಳಂತಿಲ, ಬಾಲಕೃಷ್ಣ ಮೊಗ್ರು ಸಹಿತ ಮುತ್ತಿತರರು ಉಪಸ್ಥಿತರಿದ್ದರು. ರಾತ್ರಿ ಗೆಂದಗಿಡಿ ನಾಟಕ ಪ್ರದರ್ಶನ ಗೊಂಡಿತು.

Related posts

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಮಾಣಿಲ ಶ್ರೀ ಭೇಟಿ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!