30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

ಬೆಳ್ತಂಗಡಿ:ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿರುವ ಪ್ರದೇಶದಲ್ಲಿ ಸಂಜೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿಯ ರಭಸದಿಂದ ಬೆಂಕಿ ವೇಗವಾಗಿ ವ್ಯಾಪಿಸುತ್ತಿದೆ.


ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಮಾರ್ಗವಾದ ಚಾರ್ಮಾಡಿ ಘಾಟಿಯ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಶೇಷವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದ ಗುಡ್ಡ ಪ್ರದೇಶದಲ್ಲಿ ಮಲಯಮಾರುತ ಪರಿಸರದಲ್ಲಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಗುಡ್ಡ ಪ್ರದೇಶವಾಗಿರುವುದರಿಂದ ವಾಹನ ಸಂಚಾರ ಹಾಗೂ ಅಗತ್ಯ ಸಲಕರಣೆಗಳ ಬಳಕೆ ಕಷ್ಟಕರವಾಗಿದ್ದು, ಕಾರ್ಯಾಚರಣೆಗೆ ಸವಾಲು ಎದುರಾಗಿದೆ.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ವಿಡಿಯೋ: ಯುವಕನ ಮೇಲೆ ಪ್ರಕರಣ ದಾಖಲು

Suddi Udaya

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!