23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

ಬೆಳ್ತಂಗಡಿ: ಬಳಂಜ ಶಿಕ್ಷಣ ಟ್ರಸ್ಟ್ ರಿ ಬಳಂಜ ಇದರ ನೇತೃತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಂಗಣ ಅಬಿವ್ರುದ್ದಿ ಕಾಮಗಾರಿ ನಡೆಯುತ್ತಿದ್ದು ಇದಕ್ಕೆ ಟ್ರಸ್ಟ್ ವತಿಯಿಂದ ಶ್ರಿಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ ಸಲ್ಲಿಸಲಾಗಿತ್ತು.

ಮನವಿಗೆ ಸ್ಪಂದಿಸಿದ ಡಾ| ಹೆಗ್ಗಡೆಯವರು ಶ್ರಿಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪರಿಶೀಲಿಸುವಂತೆ ಸೂಚಿಸಿದ್ದು ಇವರ ಸೂಚನೆಯಂತೆ ಯೋಜನೆಯ ಅಧಿಕಾರಿಗಳು ಕ್ರೀಡಾಂಗಣ ಕಾಮಗಾರಿ ಪರಿಶೀಲಿಸಿದ್ದರು. ಇದರಂತೆ ಫೆ.20 ರಂದು ಮೂರು ಲಕ್ಷ ರೂ ಅನುದಾನದ ಮಂಜೂರಾತಿ ಪತ್ರವನ್ನು ಬಳಂಜ ಶಿಕ್ಷಣ ಟ್ರಸ್ಟ್ ರಿ ಬಳಂಜ ಇದರ ಅಧ್ಯಕ್ಷ ಮನೋಹರ್ ಬಳಂಜರಿಗೆ ಯೋಜನೆಯ ನಿರ್ದೇಶಕ ದಿನೇಶ್ ಪೂಜಾರಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಳಂಜ ಶಿಕ್ಷಣ ಟ್ರಸ್ಟ್ ನ ಟ್ರಷ್ಟಿಗಳು ಪ್ರಮೋದ್ ಜೈನ್, ಯೋಜನಾಧಿಕಾರಿ ಅಶೋಕ್ ಬಿ, ಮೇಲ್ವಿಚಾರಕಿ ಪದ್ಮಾವತಿ, ಕಾರ್ಯನಿರತರಾದ ಉಮಾ, ಪೂರ್ಣಿಮ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ , ಶಿಕ್ಷಕಿ ಶೈನಿ ರೀಮಾ ಕ್ರಾಸ್ತಾ ಉಪಸ್ಥಿತರಿದ್ದರು. ಟ್ರಸ್ಟ್ ನೇತ್ರತ್ವದಲ್ಲಿ ಚಿಣ್ಣರ ಅಂಗಣ , ರಂಗಮಂದಿರ ನಿರ್ಮಾಣ, ಕಂಪ್ಯೂಟರ್ ಕೊಠಡಿ ನಿರ್ಮಾಣಕ್ಕೆ ಯೋಜನೆ ರೂಪಿಸಿ ಶಿಲಾನ್ಯಾಸ ನೆರವೇರಿಸಲಾಗಿದೆ. ಟ್ರಸ್ಟ್ ವತಿಯಿಂದ ಈಗಾಗಲೆ ನಾಲ್ಕು ಗೌರವ‌ ಶಿಕ್ಷಕಿಯರಿಗೆ ಗೌರವಧನ, ಒರ್ವ ಸಹಾಯಕಿಗೆ ಗೌರವಧನ ನೀಡಲಾಗುತ್ತಿದೆ. ಉಚಿತ ಎಲ್ ಕೆ ಜಿ ,ಯು ಕೆ ಜಿ ಶಿಕ್ಷಣ ನೀಡಲಾಗುತ್ತಿದೆ.

Related posts

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya
error: Content is protected !!