25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

ಬೆಳ್ತಂಗಡಿ: ಆದಿದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ, ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವು ಫೆ.25ರಿಂದ ಮಾ.1ರ ತನಕ ಮೂಡಬಿದಿರೆ ಶ್ರೀ ಶಿವಾನಂದ ತಂತ್ರಿಯವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನದೊಂದಿಗೆ ತೌಳವ ಪರಂಪರೆಯ ಅನುಸಾರ ನಡೆಯಲಿದೆ.

ಫೆ.25ರಂದು ಸಂಜೆ ಸ್ವಸ್ತಿ ಪುಣ್ಯಾಹ ಸ್ಥಳ ಶುದ್ಧಿ, ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮೂಹೂರ್ತ ನಡೆಯಲಿದೆ. ಫೆ.೨೬ರಂದು ಬೆಳಗ್ಗೆ ಗಣಪತಿ ಹೋಮ, ಗುರುಪೂಜೆ, ತೋರಣ ಮೂಹೂರ್ತ, ನಾಗದೇವರ ಸಾನಿಧ್ಯದಲ್ಲಿ ನವಕಲಶ, ಆಶ್ಲೇಷ ಬಲಿ ಮತ್ತು ಧೂಮಾವತಿ ಸಾನಿಧ್ಯ ಹಾಗೂ ಪರಿವಾರ ಸಾನಿಧ್ಯದಲ್ಲಿ ಶುದ್ದಿ ನವಕ ಕಲಶಾಭಿಷೇಕ, ಧ್ವಜಾರೋಹಣ, ಪರ್ವ ಸೇವೆ, ಮೂಲಸ್ಥಾನ ಗರಡಿಯಲ್ಲಿ ಮಹಾಪೂಜೆ, ಮಧ್ಯಾಹ್ನ ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಭಗವತೀ ಸೇವೆ, ಧೂಮಾವತಿ ಬಲಿ ಉತ್ಸವ, ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ, ರಾತ್ರಿ ಕಲ್ಲಾಲ್ದಾಯ ಗುಳಿಗ ನೇಮೋತ್ಸವ ಜರುಗುವುದು.

ಫೆ.27ರಂದು ಬೆಳಗ್ಗೆ ಗಣಪತಿ ಹೋಮ, ಧೂಮಾವತಿ ದೈವದ ಭಂಡಾರ ಇಳಿದು ನೇಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಧೂಮಾವತಿ ಬಲಿ ಉತ್ಸವ, ರಾತ್ರಿ ಕುಪ್ಪೆ ಪಂಜುರ್ಲಿ ದೈವದ ಭಂಡಾರ ಇಳಿಯುವುದು, ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ, ಕುಪ್ಪೆ ಪಂಜುರ್ಲಿ, ಕೊರತಿ ದೈವದ ನೇಮೋತ್ಸವ ನಡೆಯಲಿರುವುದು.


ಮಡಿಲು ಸೇವೆ-ಮಾತೆ ಮಕ್ಕಳ ಪುನೀತ ಸಮಾಗಮ:
ಫೆ.28 ರಂದು ಬೆಳಗ್ಗೆ ಗಣಪತಿ ಹೋಮ, ನವಕ ಕಲಶಾಭಿಷೇಕ, ಮಧ್ಯಾಹ್ನ ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆ, ಪಲ್ಲಪೂಜೆ, ಅನ್ನಸಂತರ್ಪಣೆ, ಮಹಾಪೂಜೆಯ ನಂತರ ಮಡಿಲು ಸೇವೆ ಪ್ರಸಾದ ವಿತರಣೆ, ಸಂಜೆ ಧೂಮಾವತಿ ಬಲಿ ಉತ್ಸವ, ಬೈದರ್ಕಳರು ಗರಡಿ ಇಳಿಯುವುದು, ರಾತ್ರಿ ದೇಯಿಬೈದೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ ಸಮಾಗಮ ನಡೆಯಲಿರುವುದು. ಬಳಿಕ ದೇಯಿ ಬೈದೈತಿ ಪ್ರಸಾದ ವಿತರಣೆ, ದೇಯಿ ಬೈದೈತಿ ಸಮಾಧಿಯಲ್ಲಿ ದೀಪಾರಾಧನೆ, ಬೈದರ್ಕಳ ದರ್ಶನ ಸೇವೆ, ಬೈದರ್ಕಳ ನೇಮೋತ್ಸವ, ಪ್ರಸಾದ ವಿತರಣೆ ನಡೆಯಲಿರುವುದು. ಮಾ.1 ರಂದು ಬೆಳಿಗ್ಗೆ ಗಣಹೋಮ ಹಾಗೂ ಎಲ್ಲಾ ಸಾನಿಧ್ಯಗಳಲ್ಲಿ ಶುದ್ದಿ ಕ್ರಿಯೆಗಳು, ಕಲಶಾಭಿಷೇಕ, ಧ್ವಜಾವರೋಹಣ ಗುರುಪೂಜೆ, ಪ್ರಸಾದ ವಿತರಣೆ ನಡೆಯಲಿರುವುದು.

Related posts

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya
error: Content is protected !!