37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

ಬೆಳ್ತಂಗಡಿ:ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿರುವ ಪ್ರದೇಶದಲ್ಲಿ ಸಂಜೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿಯ ರಭಸದಿಂದ ಬೆಂಕಿ ವೇಗವಾಗಿ ವ್ಯಾಪಿಸುತ್ತಿದೆ.


ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಮಾರ್ಗವಾದ ಚಾರ್ಮಾಡಿ ಘಾಟಿಯ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಶೇಷವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದ ಗುಡ್ಡ ಪ್ರದೇಶದಲ್ಲಿ ಮಲಯಮಾರುತ ಪರಿಸರದಲ್ಲಿ ಬೆಂಕಿ ವ್ಯಾಪಕವಾಗಿ ಹರಡುತ್ತಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಗುಡ್ಡ ಪ್ರದೇಶವಾಗಿರುವುದರಿಂದ ವಾಹನ ಸಂಚಾರ ಹಾಗೂ ಅಗತ್ಯ ಸಲಕರಣೆಗಳ ಬಳಕೆ ಕಷ್ಟಕರವಾಗಿದ್ದು, ಕಾರ್ಯಾಚರಣೆಗೆ ಸವಾಲು ಎದುರಾಗಿದೆ.

Related posts

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!