September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

ಬೆಳ್ತಂಗಡಿ: ಮಂಗಳೂರಿನ ನಾಟ್ಯಾರಾಧನಾ ಕಲಾ ಕೇಂದ್ರದ ನಿರ್ದೇಶಕಿ ಗುರು ವಿದುಷಿ ಸುಮಂಗಲಾ ರತ್ನಾಕರ್‌ರಾವ್ ಅವರ ವಿದ್ಯಾರ್ಥಿಗಳಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಇವರ ಭರತನಾಟ್ಯ ರಂಗಪ್ರವೇಶವು ಫೆ. 21ರಂದು ಉಜಿರೆಯ ಎಸ್.ಡಿ.ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಅಭಿನವ ಡಾನ್ಸ್ ಕಂಪೆನಿಯ ನಿರುಪಮಾ ಮತ್ತು ರಾಜೇಂದ್ರ ಟಿ.ಡಿ, ನಾಟ್ಯಾಂಜಲಿ ಕಲಾ ಅಕಾಡಮಿ ಸುರತ್ಕಲ್‌ನ ವಿದ್ವಾನ್ ಚಂದ್ರಶೇಖರ ನಾವಡ, ಎಸ್.ಡಿ.ಎಂ. ಸೊಸೈ ಟಿಯ ಕಾರ್ಯದರ್ಶಿಗಳಾದ ಸತೀಶ್ಚಂದ್ರ, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿರುವ ಶರತ್ ಕೃಷ್ಣ ಪಡ್ಡೆಟ್ನಾಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಧರಿತ್ರಿ ಮತ್ತು ಹಂಸಿನಿ ಬೆಳ್ತಂಗಡಿಯ ಕಲ್ಮಂಜ ನಿವಾಸಿ, ಸುದ್ದಿ ಉದಯ ಪತ್ರಿಕಾ ವಿತರಕರಾದ ಧನಂಜಯ ಭಿಡೆ ಹಾಗೂ ಚಿತ್ರಾ ಭಿಡೆ ದಂಪತಿಯ ಪುತ್ರಿಯರು.

Related posts

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya
error: Content is protected !!