September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

ಬೆಳ್ತಂಗಡಿ : ಅಂಗಳಕ್ಕೆ ನಾಯಿ ತಂದು ಹಾಕಿದ ಚೆಂಡಿನಂಥ ಸ್ಫೋಟಕ ವಸ್ತುವನ್ನು ಬಾಲ್ ಎಂದು ಭ್ರಮಿಸಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಭಯಂಕರ ಸದ್ದಿನಲ್ಲಿ ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಮನೆಗೆ ಫೆ.19 ರಂದು ಸಂಜೆ ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡ ಭೇಟಿ ನೀಡಿ ಘಟನಾ ಸ್ಥಳದಲ್ಲಿ ಪರಿಶೀಲಿಸಿ ಮಹಜರು ನಡೆಸಿದ್ದಾರೆ.

ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಎಂಬಾತ ಮನೆಯಂಗಳದಲ್ಲಿ ಫೆ.18ರಂದು ಸಂಜೆ ಸಂಭವಿಸಿದ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡ ಸದೃಶವಾಗಿ ಪಾರಾಗಿದ್ದರು. ಚೆಂಡಿನಂಥ ವಸ್ತುವೊಂದನ್ನು ಮನೆಯ ನಾಯಿ ಎಲ್ಲಿಂದಲೋ ಕಚ್ಚಿಕೊಂಡು ಬಂದು ಅಂಗಳದ ಬದಿಯಲ್ಲಿ ಹಾಕಿದ್ದು ಇದು ಏನೆಂದು ತಿಳಿಯದ ಮುಗ್ಧ ಮಕ್ಕಳು ಬಾಲ್ ಎಂದು ಕ್ರಿಕೆಟ್ ಆಡುತ್ತಿದ್ದಾಗ ಆ ವಸ್ತು ಸ್ಫೋಟಗೊಂಡಿದ್ದು ಸ್ಫೋಟದ ತೀವ್ರತೆಗೆ ಬಾಲಕ ಅಭೀಶ್ ಎಂಬಾತ ಗಾಯಗೊಂಡಿದ್ದ. ಗಾಯಗೊಂಡ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸ್ಫೋಟಗೊಂಡ ಮನೆಗೆ ಧರ್ಮಸ್ಥಳ ಎಸ್ ಐ ಸಮರ್ಥ್ ಗಾಣಿಗೇರ್, ಸೋಕೋ ವಿಭಾಗದ ಸುಮಂತ್, ಆಶಿಫ್ ಅವರುಗಳನ್ನೊಳಗೊಂಡ ಪೊಲೀಸರ ತಂಡ ಗುರುವಾರ ಸಂಜೆ ಭೇಟಿ ನೀಡಿ ಮನೆಯವರಿಂದ ಘಟನೆಯ ಮಾಹಿತಿ ಪಡೆದಿದ್ದಾರೆ.


ಈ ಸಂದರ್ಭ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ಸ್ಫೋಟಕದ ಅವಶೇಷ ಮಾದರಿಗಳನ್ನು ಸಂಗ್ರಹಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಖಂಡಿಗ, ಸ್ಥಳೀಯರಾದ ಸಂತೋಷ್ ಬಲಿಪೆ ಇದ್ದರು.

Related posts

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!